ಜಿಲ್ಲಾ ಸುದ್ದಿ

ಧೀರಜ್ ಪೊಯ್ಯೆಕಂಡ ಅವರ ‘ಮಿತಿ’ ಕಾದಂಬರಿ ಬಿಡುಗಡೆ

ಜಾಹೀರಾತು

ಲೇಖಕ ನಿರಂತರ ಅಧ್ಯಯನಶೀಲನಾಗುವ ಜತೆಗೆ ತನ್ನ ಆವರಣವನ್ನು ಗಟ್ಟಿ ಮಾಡಿಕೊಂಡಾಗ ಆತನಿಂದ ಇನ್ನಷ್ಟು ಉತ್ತಮ ಬರಹಗಳು ಹೊರಹೊಮ್ಮಲು ಸಾಧ್ಯ ಎಂದು ಸಾಹಿತಿ ವಿವೇಕಾನಂದ ಕಾಮತ್ ಹೇಳಿದರು.
ಬಿಜೈ ಭಾರತಿನಗರದ ಆ್ಯಡ್ ಐಡಿಯಾದಲ್ಲಿ ಗುರುವಾರ ಯುವಲೇಖಕ, ಪತ್ರಕರ್ತ ಧೀರಜ್ ಪೊಯ್ಯೆಕಂಡ ಅವರ ‘ಮಿತಿ’ ಚೊಚ್ಚಲ ಕಾದಂಬರಿ ಬಿಡುಗಡೆಗೊಳಿಸಿ ಮಾತನಾಡಿದರು. ಸಾಹಿತ್ಯ ಕಲ್ಲುಬಂಡೆಯಲ್ಲಿ ಮೂಡಿಬರುವ ಮೂರ್ತಿಯಂತೆ. ನಮ್ಮನ್ನು ನಾವೇ ಕೆತ್ತಿಕೊಂಡು, ಅದು ಅಲಂಕಾರಕ್ಕೆ ಆಗಬೇಕೆ, ಇಲ್ಲವೇ ಓದುಗರ ಮನಸ್ಸಲ್ಲಿ ಸ್ಥಾಪನೆಯಾಗಬೇಕೆ ಎನ್ನುವುದು ಲೇಖಕನ ಅಧ್ಯಯನಶೀಲತೆಯಿಂದ ಹೊರಬರುತ್ತದೆ ಎಂದರು.

ಕಾದಂಬರಿ ಪರಿಚಯ ಮಾಡಿದ ಬರಹಗಾರ್ತಿ ರಶ್ಮಿ ಶರ್ಮ, ಈ ಕಾದಂಬರಿ ನೈಜತೆಗೆ ತುಂಬಾ ಹತ್ತಿರವಾಗಿದೆ. ನಮ್ಮ ಸುತ್ತಮುತ್ತ ನಡೆಯುವ ವಿಷಯಗಳೇ ಈ ಪುಸ್ತಕದ ಪ್ರಮುಖ ವಸ್ತುವಾಗಿದೆ. ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಚಯಿಸುವ ಕೆಲಸವೂ ಈ ಕಾದಂಬರಿ ಮೂಲಕ ಆಗಿದೆ ಎಂದು ವಿವರಿಸಿದರು.ಮಂಗಳೂರು ವಿಶ್ವವಿದ್ಯಾಲಯ ಪತಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಸಂಘಟನೆ (ಮಾಮ್) ಗೌರವಾಧ್ಯಕ್ಷ ವೇಣು ಶರ್ಮ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ದಿನಕರ ಇಂದಾಜೆ ಉಪಸ್ಥಿತರಿದ್ದರು.

ಜಾಹೀರಾತು

ಪತ್ರಕರ್ತರಾದ ಕೃಷ್ಣಮೋಹನ್ ಕಾರ್ಯಕ್ರಮ ನಿರೂಪಿಸಿದರು. ವೇಣುವಿನೋದ್ ಕೆ.ಎಸ್. ಸ್ವಾಗತಿಸಿದರು. ಧೀರಜ್ ಪೊಯ್ಯೆಕಂಡ ವಂದಿಸಿದರು. ಅವನಿ ಶರ್ಮ ಸಹಕರಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ