ಬಂಟ್ವಾಳ

ಪಣೋಲಿಬೈಲ್ ಕ್ಷೇತ್ರದಲ್ಲಿ ಕಲೆಯೆರ್ಕಿ ಕಲ್ಲುರ್ಟಿ ವೀಡಿಯೋ ಆಲ್ಬಮ್ ಬಿಡುಗಡೆ

ಜಾಹೀರಾತು

ದಕ್ಷ ಕ್ರಿಯೇಷನ್ಸ್ ಮಂಗಳೂರು ಪ್ರಸ್ತುತಿಯ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರ್ ಮೇಗಿನಮನೆ ನಿರ್ಮಾಣದಲ್ಲಿ ಉದಯೋನ್ಮುಖ ಯುವ ಗಾಯಕ ಮನೀಶ್ ಕುತ್ತಾರ್ ಧ್ವನಿ ನೀಡಿರುವ ಕಲೆಯೆರ್ಕಿ ಕಲ್ಲುರ್ಟಿ ವೀಡಿಯೋ ಆಲ್ಬಮ್ ಶನಿವಾರದಂದು ಬಂಟ್ವಾಳ ತಾಲೂಕಿನ ಪಣೋಲಿ ಬೈಲು ಕಲ್ಲುರ್ಟಿ ಕ್ಷೇತ್ರದಲ್ಲಿ ಬಿಡುಗಡೆಯಾಯಿತು.

ನಿವೃತ್ತ ಕಾರ್ಗಿಲ್ ಯೋಧ ಪ್ರವೀಣ್ ಶೆಟ್ಟಿ ಪಿಲಾರ್ ಅವರು ವೀಡಿಯೋ ಆಲ್ಬಮ್  ಬಿಡುಗಡೆ ಮಾಡಿದರು.ಈ ವೇಳೆ ಮಾತನಾಡಿದ ಅವರು ಹಿಂದೆ ಕಲಾವಿದರು ಅವಕಾಶಕ್ಕಾಗಿ ಕಾಯುವುದೋ ಅಥವಾ ಯಾರದೋ ಬೆನ್ನ ಹಿಂದೆ ಬೀಳೋ ಪರಿಸ್ಥಿತಿ ಇತ್ತು.ಆದರೆ ಇಂದು ಕಲಾವಿದರು ತಮ್ಮ ಕಲೆಯನ್ನು ಅನಾವರಣಗೊಳಿಸಲು ಇಂತಹ ಆಲ್ಬಮ್ ಗಳು ಪ್ರಮುಖ ಪಾತ್ರವಹಿಸುವುದಲ್ಲದೆ,ಇಂತಹ ಪ್ರಯತ್ನದಲ್ಲಿ ಕಲಾವಿದರು ರಾತ್ರಿ ಕಳೆದು ಹಗಲಾಗುವಾಗ ಪ್ರಸಿದ್ಧಿ ಪಡೆದಿರುವ ಉದಾಹರಣೆಗಳಿವೆ.ಬೆನ್ನು ತಟ್ಟಿ  ಹುರಿದುಂಬಿಸುವ ಜನರಿದ್ದರೆ ಬಡ ಕಲಾವಿದರ ಕಲಾ ನೈಪುಣ್ಯತೆಯು ಪ್ರಪಂಚಕ್ಕೆ ಪರಿಚಿತವಾಗಲು ಸಾಧ್ಯ ಎಂದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್  ಮಾತನಾಡಿ ಮನೀಶ್ ಕುತ್ತಾರ್ ಏಕಲವ್ಯನ ಹಾಗೆ.ನಿರ್ದಿಷ್ಟ ಗುರುಗಳಿಲ್ಲದ ಪ್ರತಿಭೆ ಅವರದ್ದಾಗಿದೆ.ಸಾಧಕರು ,ಕಲಾವಿದರು ಯಾರೇ ಆಗಲಿ ಅವರಲ್ಲಿ ವಿದೇಯತೆ ಇರಬೇಕು ಆ ವಿದೇಯತೆಯನ್ನು ಮನೀಷ್ ಅವರು ಮೈಗೂಡಿಸಿದ್ದು ಅವರು ಉತ್ತಮ ಗಾಯಕರಾಗಿ ಪ್ರಸಿದ್ಧಿ ಪಡೆಯಲೆಂದು ಹಾರೈಸಿದರು.

ರಮೇಶ್ ಎಮ್. ಪಣೋಲಿಬೈಲು ಭಂಡಾರಮನೆ, ಅರ್ಚಕರಾದ ರಮೇಶ್ ಮೂಲ್ಯ  , ಗುಡ್ಡಮೂಲ್ಯ ಯಾನೆ ವಾಸುದೇವ್ ಮೂಲ್ಯ , ಮನೀಷ್ ಕುತ್ತಾರ್ , ಸುನಿಲ್ ಕುಮಾರ್ ,ರಜನೀಶ್ ನಾಯ್ಕ್ ಪಂಡಿತ್ ಹೌಸ್, ಪ್ರತೀಕ್  ಬಜ್ಪೆ, ಸಂತೋಷ್ ವಿಟ್ಲ, ನಿಖಿತ್  ಕುತ್ತಾರ್ ಉಪಸ್ಥಿತರಿದ್ದರು. ಮನೋಜ್ ವಾಮಂಜೂರು ಅವರು ಸ್ವಾಗತಿಸಿ ,ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.