ಚೌತಿ ಹಬ್ಬಕ್ಕೆ ಕಾಲಲ್ಲೇ ‘ಕೊಟ್ಟಿಗೆ’ ಕಟ್ಟುವ ಮೂಲಕ ಗಮನ ಸೆಳೆದ ಕೌಶಿಕ್

 

ಜಾಹೀರಾತು

ಜಾಹೀರಾತು

 

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಷ್ಟಮಿ, ಚೌತಿ ಸಂದರ್ಭ ಹಲಸಿನೆಲೆಯ ದೊನ್ನೆಯಲ್ಲಿ ಕಡುಬು ಮಾಡುವ ಸಂಪ್ರದಾಯವಿದೆ. ಎರಡೂ ಕೈಗಳಿಲ್ಲದೆ ಕಾಲಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು, ಉತ್ತಮ ಅಂಕ ಗಳಿಸಿ ಸಚಿವ ಸುರೇಶ್ ಕುಮಾರ್ ಗಮನ ಸೆಳೆದ ಬಂಟ್ವಾಳದ ಕೌಶಿಕ್ ಆಚಾರ್ಯ, ಕಾಲಿನಲ್ಲಿ ಎಲೆಗಳನ್ನು ಪೋಣಿಸಿ, ಕೊಟ್ಟಿಗೆ ಕಟ್ಟುವ ದೃಶ್ಯವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬಹುಪ್ರತಿಭೆಯ ಕೌಶಿಕ್, ಹಾಡು, ನೃತ್ಯಗಳಲ್ಲೂ ಮುಂದಿದ್ದಾನೆ. ಈಗಾಗಲೇ ಎಸ್.ಎಸ್.ಎಲ್.ಸಿ.ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದು, ಶಾಸಕ ರಾಜೇಶ್ ನಾಯ್ಕ್ ಸಹಿತ ಹಲವು ಸಂಘ, ಸಂಸ್ಥೆಗಳು ಈತನ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗುವುದಾಗಿ ಹೇಳಿವೆ. ಈತ ಕಾಲ್ಬೆರಳಲ್ಲಿ ಪರೀಕ್ಷೆ ಬರೆಯುವ ಫೊಟೋವನ್ನು ಸುರೇಶ್ ಕುಮಾರ್ ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಹಾಕಿಕೊಂಡ ಬಳಿಕ ರಾಜ್ಯಾದ್ಯಂತ ಗಮನ ಸೆಳೆದಿದ್ದ. ಬಳಿಕ ಪರೀಕ್ಷೆ ಮುಗಿದ ಬಳಿಕ ಪೊಳಲಿಗೆ ಆಗಮಿಸಿದ್ದ ಸಚಿವರು, ಈತನನ್ನು ಭೇಟಿಯಾಗಿ ಮಾತನಾಡಿಸಿದ್ದರು. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಅಂಕ ಗಳಿಸಿದ ನಂತರ ಕೌಶಿಕ್ ಮತ್ತೊಮ್ಮೆ ಸುದ್ದಿಯಾಗಿದ್ದ. ಇದೀಗ ಕಾಲ್ಬೆರಳಲ್ಲೇ ಮೂಡೆ ಕಟ್ಟುವ ಮೂಲಕ ಸಾಧನೆಗೆ ಅಂಗವೈಕಲ್ಯತೆ ಅಡ್ಡಿ ಅಲ್ಲ, ಆತ್ಮವಿಶ್ವಾಸವೊಂದಿದ್ದರೆ ಸಾಕು ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾನೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಚೌತಿ ಹಬ್ಬಕ್ಕೆ ಕಾಲಲ್ಲೇ ‘ಕೊಟ್ಟಿಗೆ’ ಕಟ್ಟುವ ಮೂಲಕ ಗಮನ ಸೆಳೆದ ಕೌಶಿಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*