ಎಂ.ಆರ್.ಪಿ.ಎಲ್, ಸಿಡಿಪಿಒ ಬಂಟ್ವಾಳ ಮತ್ತು ವಿಟ್ಲ ವಿಭಾಗ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮತ್ತು ಕೃತಕ ಅಂಗಾಂಗ ತಯಾರಿಕೆ ಕಾರ್ಪೊರೇಶನ್ ಆಫ್ ಇಂಡಿಯಾ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಬಂಟ್ವಾಳ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಬಿ.ಸಿ.ರೋಡಿನ ಸ್ತ್ರೀಶಕ್ತಿ ಸಭಾಭವನದಲ್ಲಿ 89 ವಿಕಲಚೇತನರಿಗೆ ಸಾಧನಾ ಸಲಕರಣೆಗಳನ್ನು ವಿತರಿಸಿತು.
ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ತಾಪಂ ಉಪನಿರ್ದೇಶಕ ಶಿವಾನಂದ, ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣಶಾಮ್, ಶ್ರೀನಿವಾಸ ಪೂಜಾರಿ ಮೇಲ್ಕಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೀತಾ, ಶಾಲಿನಿ ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಪಂಚಾಯಿತಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಗಿರೀಶ್ ಕುಮಾರ್ ವಂದಿಸಿದರು. ಡಿಡಿಆರ್ ಸಿ ಅಧಿಕಾರಿ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…