ಕೊರೋನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಅನಗತ್ಯ ವಿಚಾರಗಳನ್ನು ತಂದು ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಬಂಟ್ವಾಳ ಸಮಾನ ಮನಸ್ಕ ಸಂಘಟನೆಯ ಸಮನ್ವಯ ಸಮಿತಿ ಆಶ್ರಯದಲ್ಲಿ ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ಸಮಿತಿ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ, ಪ್ರಮುಖರಾದ ನ್ಯಾಯವಾದಿ ನೋಟರಿ ಎಂ.ಚಂದ್ರಶೇಖರ ಪೂಜಾರಿ, ಬಿ.ಶೇಖರ್, ಪ್ರಕಾಶ್ ಶೆಟ್ಟಿ, ರಾಜಾ ಚಂಡ್ತಿಮಾರ್, ರಾಮಣ್ಣ ವಿಟ್ಲ, ಸದಾಶಿವ ಬಂಗೇರ, ನ್ಯಾಯವಾದಿ ತುಳಸೀದಾಸ್ ವಿಟ್ಲ, ಸುರೇಂದ್ರ ಕೋಟ್ಯಾನ್, ಉದಯ ಕುಮಾರ್, ಪುರಸಭಾ ಸದಸ್ಯರಾದ ಲೋಲಾಕ್ಷ ಶೆಟ್ಟಿ, ಗಂಗಾಧರ, ಪ್ರಕಾಶ ಶೆಟ್ಟಿ ಮುಂತಾದವರು ಸಭೆಯ ನೇತೃತ್ವ ವಹಿಸಿದ್ದರು. ಸುರೇಶ್ ಕುಮಾರ್ ಸ್ವಾಗತಿಸಿ,ಲೋಕೇಶ್ ಸುವರ್ಣ ವಂದಿಸಿದರು. ಬಳಿಕ ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವೈಫಲ್ಯ ಮರೆಮಾಚುತ್ತಿರುವ ಸರ್ಕಾರ: ಸಮಾನ ಮನಸ್ಕ ಸಂಘಟನೆಗಳ ಆರೋಪ"
Be the first to comment on "ವೈಫಲ್ಯ ಮರೆಮಾಚುತ್ತಿರುವ ಸರ್ಕಾರ: ಸಮಾನ ಮನಸ್ಕ ಸಂಘಟನೆಗಳ ಆರೋಪ"