ವಿಟ್ಲ

ವಿಟ್ಲದಲ್ಲಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮಾಹಿತಿ ಕಾರ್ಯಾಗಾರ

ಜಾಹೀರಾತು

ವಿಟ್ಲ: 2020-21 ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮಾಹಿತಿ ಕಾರ್ಯಾಗಾರ ವಿಟ್ಲ ಗಜಾನನ ಮಿನಿಹಾಲ್ ನಲ್ಲಿ ನಡೆಯಿತು. ಕೃಷಿ ಉಪ ನಿರ್ದೇಶಕರಾದ ಭಾನುಪ್ರಕಾಶ್ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಗ್ಗೆ ನೇಮಕಗೊಂಡ ಖಾಸಗಿ ನಿವಾಸಿಗಳಿಗೆ ಮೊಬೈಲ್ ಆ್ಯಪ್ ಕಾರ್ಯದ ಬಗ್ಗೆ ತಿಳಿಸಿದರು.

ಈ ವೇಳೆ ಆಪ್ ನಲ್ಲಿರುವ ತಾಂತ್ರಿಕ ಸಮಸ್ಯೆ ಬಗೆಹರಿಸುವ ಕುರಿತು ಸ್ಥಳೀಯರು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್, ಮಾತನಾಡಿ, ಬೆಳೆ ಸಮೀಕ್ಷೆ ನಡೆಸುವ ಖಾಸಗಿ ನಿವಾಸಿಗಳು, ಸರಕಾರದ ವತಿಯಿಂದ ನೀಡಲ್ಪಡುವ ಗೌರವಧನದ ಜೊತೆಗೆ ಇಲಾಖೆಯೊಂದಿಗೆ ಸೇವಾ ಮನೋಭಾವ ಬೆಳೆಸಿ ಬೆಳೆ ಸಮೀಕ್ಷೆ ಕೆಲಸ ಯಶಸ್ವಿಯಾಗಿ ನಿರ್ವಹಿಸುವಂತೆ ಹೇಳಿದರು. ಸಹಾಯಕ ತೋಟಗಾರಿಕಾ ನಿರ್ದೇಶಕರಾದ ದಿನೇಶ್, ಸಹಾಯಕ ಕೃಷಿ ನಿರ್ದೇಶಕರಾದ ನಾರಾಯಣ ಶೆಟ್ಟಿ, ವಿಟ್ಲ ಆರ್.ಐ. ದಿವಾಕರ್ ಎಂ, ವಿಟ್ಲ ಹೋಬಳಿಯ ಗ್ರಾಮಕರಣಿಕರು, ಗ್ರಾಮಸಹಾಯಕರು ಭಾಗವಹಿಸಿದರು. ವಿಟ್ಲ ಹೋಬಳಿ ಕೃಷಿ ಅಧಿಕಾರಿ ಸರಿಕಾರ್ ಕಾರ್ಯಕ್ರಮ ನಿರ್ವಹಿಸಿದರು, ಕೊಳ್ನಾಡು ಗ್ರಾಮಲೆಕ್ಕಿಗ ಅನಿಲ್ ಕುಮಾರ್ ವಂದನಾರ್ಪಣೆಗೈದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ