ಜಿಲ್ಲಾ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶ ಸ್ಫೂರ್ತಿದಾಯಕ, ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ

ಜಾಹೀರಾತು

ಸಮಾಜದಲ್ಲಿರುವ ನ್ಯೂನತೆ, ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಪೂರ್ತಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಅಧಿಕಾರಿಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳನ್ನು ಮನನ ಮಾಡಿಕೊಂಡು ಸಮಾಜದಲ್ಲಿರುವ ಅಸಮಾನತನೆಯನ್ನು ಹೋಗಲಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು ಮಾತನಾಡಿ, ಕೊವೀಡ್‍ನಿಂದಾಗಿ ಜನರ ಜೀವನ ಶೈಲಿ ಬದಲಾಗಿದ್ದು, ಇಡೀ ಜಗತ್ತೇ ಸರಳತೆಯ ಕಡೆಗೆ ಸಾಗುತ್ತಿದೆ, ಬ್ರಹ್ಮಶ್ರೀ ನಾರಾಯಣ ಗುರುಗಳು ಹಲವು ವರ್ಷಗಳ ಹಿಂದೆಯೇ ಸರಳತೆಯ ತತ್ವವನ್ನು ಪ್ರತಿಪಾದಿಸಿದ್ದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ ಮತ್ತಿತರರು ಉಪಸ್ಥಿತರಿದ್ಧರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts