ಮರುಜೀವ ಪಡೆದ ಸರ್ಕಾರಿ ಶಾಲೆಗಳು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಏರಿಕೆ

ಜಾಹೀರಾತು

ಬಂಟ್ವಾಳ ತಾಲೂಕಿನ ಕೆಲ ಸರ್ಕಾರಿ ಶಾಲೆಗಳಲ್ಲೀಗ ಆಶಾದಾಯಕ ಬೆಳವಣಿಗೆ. ಮಕ್ಕಳ ದಾಖಲಾತಿ ಗಣನೀಯವಾಗಿ ಈ ಶಾಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗುತ್ತಿದೆ.

ಜಾಹೀರಾತು

ದಡ್ಡಲಕಾಡು ಸರ್ಕಾರಿ ಶಾಲೆಗೆ ವರ್ಷ ದಾಖಲೆಯ 273 ಮಕ್ಕಳು ಸೇರ್ಪಡೆಯಾದರೆ, ಕಲ್ಲಡ್ಕದಲ್ಲಿರುವ ಸರ್ಕಾರಿ ಶಾಲೆಗೆ 100 ಮಕ್ಕಳು ಬಂದಿದ್ದಾರೆ. ದಡ್ಡಲಕಾಡು ಶಾಲೆಗೆ 2ರಿಂದ 8ನೇ ತರಗತಿವರೆಗೆ 135 ಮಕ್ಕಳು ಸೇರ್ಪಡೆಗೊಂಡರೆ, 1ನೇ ತರಗತಿಗೆ 104 ಮಕ್ಕಳು ಸೇರ್ಪಡೆಯಾಗಿದೆ. 9ನೇ ತರಗತಿ ಇಲ್ಲಿ ಹೊಸದಾಗಿ ಆರಂಭಗೊಂಡಿದ್ದು, 34 ಮಂದಿ ಸೇರಿದ್ದಾರೆ. ನಾಲ್ಕೈದು ವರ್ಷಗಳ ಹಿಂದೆ ಶಾಲೆ ಮುಚ್ಚುವ ಹಂತಕ್ಕೆ ಬಂದಿತ್ತು.

ಕಲ್ಲಡ್ಕ ಪೇಟೆಯಲ್ಲೇ ಇರುವ ..ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಷ 1ನೇ ತರಗತಿಗೆ 65 ಮಕ್ಕಳು ಸೇರಿದರೆ, 2ರಿಂದ 8ನೇ ತರಗತಿವರೆಗೆ 35 ಮಕ್ಕಳ ಸೇರ್ಪಡೆಯಾಗಿದೆ. ಇದೇ ಶಾಲೆಯಲ್ಲಿ ಮೂರು ವರ್ಷಗಳ ಹಿಂದೆ ಸೇರ್ಪಡೆಯಾದದ್ದು 9 ಮಕ್ಕಳು. ಎರಡು ವರ್ಷಗಳ ಹಿಂದೆ 23, ಕಳೆದ ವರ್ಷ ಒಂದನೇ ತರಗತಿಗೆ 37 ದಾಟಿತ್ತು. ಒಟ್ಟಾರೆಯಾಗಿ ದಡ್ಡಲಕಾಡು ಶಾಲೆಗೆ 273 ಮತ್ತು ಕಲ್ಲಡ್ಕ ಶಾಲೆಗೆ 100 ಮಕ್ಕಳು ಸೇರಿದಂತಾಗಿದೆ. ಇನ್ನು ಉಳಿದ ಸರ್ಕಾರಿ ಶಾಲೆಗಳೂ ದಾಖಲಾತಿಯಲ್ಲಿ ಹಿಂದೆ ಬಿದ್ದಿಲ್ಲ. ಜೀವನಶೈಲಿಯ ಬದಲಾವಣೆ, ಆದಾಯದ ಹೊಂದಾಣಿಕೆಯಷ್ಟೇ ಇದಕ್ಕೆ ಕಾರಣವಲ್ಲ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಕಲಿಕಾ ಶಿಕ್ಷಣವನ್ನು ನುರಿತ ಬೋಧಕವೃಂದದಿಂದ ಒದಗಿಸುವುದು ಪ್ರಧಾನ ಆಕರ್ಷಣೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮರುಜೀವ ಪಡೆದ ಸರ್ಕಾರಿ ಶಾಲೆಗಳು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಏರಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*