ಬಂಟ್ವಾಳ: ರಾಷ್ಟ್ರವ್ಯಾಪಿ ನಡೆಯುತ್ತಿರುವ ಕರಾಳ ಡ್ರಗ್ಸ್ ದಂಧೆ ನಡೆಸುವವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಬಂಟ್ವಾಳ ಉಪತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು .
ಈ ಸಂದರ್ಭದಲ್ಲಿ ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ನಗರ ಕಾರ್ಯದರ್ಶಿಯಾದ ಅಖಿಲಾಷ್ ,ನಗರ ಸಹಕಾರ್ಯದರ್ಶಿಗಳಾದ ನಾಗರಾಜ್ ಶೆಣೈ, ಸಚಿನ್ ಹಾಗೂ ಗಗನ್, ಅನೀಶ್ ಚೇಳೂರು,ಸಂದೇಶ್,ಭರತ್ ಗಟ್ಟಿ,ರಂಜಿತ್ ಮುಂತಾದವರು ಉಪಸ್ಥಿತರಿದ್ದರು.