ಕಲ್ಲಡ್ಕ

ಬಿಜೆಪಿ ಅಮ್ಟೂರು ಬೂತ್ ಸಮಿತಿಯಿಂದ ಹಿರಿಯ ನಾಯಕಿಗೆ ಸನ್ಮಾನ

ಜಾಹೀರಾತು

ಬಂಟ್ವಾಳ: ಬಿಜೆಪಿಯ ಅಮ್ಟೂರು ಗ್ರಾಮದ ಬೂತ್ ಸಮಿತಿ ವತಿಯಿಂದ ಗ್ರಾಮದ ಹಿರಿಯ ಬಿಜೆಪಿ ನಾಯಕಿ ವಿಶಾಲ ಡಿ.ಶೆಟ್ಟಿ ಬಾಳಿಕೆ ಅವರನ್ನು ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಸನ್ಮಾನಿಸಿದರು. ಕಳೆದ ಕೆಲವು ವರ್ಷಗಳಿಂದ ಅಮ್ಟೂರು  ಗ್ರಾಮದಲ್ಲಿ  ಹಲವು ಹಿರಿಯರಾದ ಪುಂಡಲಿಕ ಪ್ರಭು, ರಮೇಶ್ ಶೆಟ್ಟಿಗಾರ್ ಕರಿಂಗಾಣ, ಸಂಜೀವ ಪೂಜಾರಿ, ಸೀತಾರಾಮ ಶೆಟ್ಟಿ ಲಕ್ಷ್ಮಿ ಪ್ರಭು ಇವರೊಂದಿಗೆ ಸೇರಿ ಪಕ್ಷ ಸಂಘಟನೆ ಮಾಡಿಕೊಂಡು ಪಂಚಾಯತ್ ಸದಸ್ಯರನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವ ಅವರು, ಅಮ್ಟೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು  ಅನುದಾನದಲ್ಲಿ ಹಾಗೂ ತಾಪಂ, ಜಿಪಂ ಸದಸ್ಯರ ಅನುದಾನದಿಂದ ಕಾಂಕ್ರಿಟೀಕರಣ ಆಗುವ ಸಂದರ್ಭ ಒಂದು ತಿಂಗಳಿಂದ ನೀರನ್ನು ಕೊಟ್ಟು ಸಹಕರಿಸಿ ನಿಸ್ವಾರ್ಥ ಸೇವೆ ಮಾಡಿದ್ದಾರೆ ಎಂದು ದಿನೇಶ್ ಅಮ್ಟೂರು ಹೇಳಿದರು. ಪರಿಶಿಷ್ಟ ಜಾತಿ ಕಾಲೊನಿ ಶಾಂತಿ ಪಳಿಕೆ ರಸ್ತೆಗೆ ಸಹಕರಿಸಿದ ಗ್ರಾಮಸ್ಥರಿಗೂ ಅಭಿನಂದನೆಯನ್ನು ತಿಳಿಸಿದರು ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಬೈದರಡ್ಕ ಶಾಲು ಹೊದಿಸಿ ಸನ್ಮಾನಿಸಿದರು ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿಗಾರ್,  ಹಿರಿಯರಾದ ಕಾಂತಪ್ಪ ಶೆಟ್ಟಿ ಬಾಳಿಕೆ, ಪುರುಷೋತ್ತಮ ಟೈಲರ್, ಹರೀಶ್ ಭಟ್ಟಹಿತ್ಲು, ರತಿನ್ ಕುಮಾರ್, ವಿಖ್ಯಾತ್ ಶೆಟ್ಟಿ ಬಾಳಿಕೆ ಉಪಸ್ಥಿತರಿದ್ದರು

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ