ಬಂಟ್ವಾಳ

70 ಅಡಿ ಆಳಕ್ಕೆ ಉರುಳಿದ ಕಾರು, ಪ್ರಯಾಣಿಕರು ಪವಾಡಸದೃಶ ಪಾರು

 

ಜಾಹೀರಾತು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಮೇಲಿಂದ ಸುಮಾರು 70 ಅಡಿ ಆಳಕ್ಕೆ ಉರುಳಿದ ಘಟನೆ ನಡೆದಿದ್ದು, ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ. ಕಾರು ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು-  ಹೆಗ್ಗಣಗುಳಿ ರಸ್ತೆಯಲ್ಲಿ ಕಾರೊಂದು ಸುಮಾರು  70 ಆಡಿ ಅಳದಲ್ಲಿರುವ ನೀರು ಹರಿಯುವ ತೋಡಿಗೆ ಬಿತ್ತು. ಚಾಲಕ ಸಹಿತ ಮೂವರು ಸಣ್ಣಪುಟ್ಟ ಗಾಯದ ಅಪಾಯದಿಂದ ಪಾರಾದರು. ಅಜಿಲಮೊಗರು ಕಡೆಯಿಂದ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಳಕ್ಕೆ ರಸ್ತೆ ಮೇಲಿಂದ ಬಾಳೆಗಿಡದ ಪೊದೆಯಲ್ಲಿ ಜಾರಿಕೊಂಡು ತೋಡಿಗೆ ಉರುಳಿ ಕಾರಿನ ಚಕ್ರ ಮೇಲ್ಮಖವಾಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ, ಘಟನೆಯಿಂದ ಕಾರಿನಲ್ಲಿದ್ದ ಯುವಕರಿಬ್ಬರ ಸಹಿತ ಚಾಲಕ ಸಣ್ಣ ಪುಟ್ಟಗಾಯಗೊಂಡು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕುತೂಹಲಿಗರು ಜಮಾಯಿಸಿದ್ದು, ಬಳಿಕ ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ