ಬಂಟ್ವಾಳ: ಗ್ರಾ.ಪಂ.ಗಳ 14ನೇ ಹಣಕಾಸು ಯೋಜನೆಯ ಕಾಮಗಾರಿಗಳನ್ನು 15 ದಿನಗಳೊಳಗೆ ಮುಗಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪಿಡಿಒ ಮತ್ತು ಆಡಳಿತಾಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಪಂ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ.ಗಳ ಪಿಡಿಒಗಳು ಹಾಗೂ ಆಡಳಿತಾಧಿಕಾರಿಗಳ ಸಭೆ ನಡೆಸಿದ ಅವರು ಸಲಹೆ ಸೂಚನೆಗಳನ್ನು ನೀಡಿದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್ ಅವರಿಗೆ ಕಾರ್ಯನಿರ್ವಹಣೆಯ ಕುರಿತು ಹಲವು ಸಲಹೆ ಸೂಚನೆಗಳನ್ನು ಶಾಸಕರು ನೀಡಿದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…