ಬಂಟ್ವಾಳ

ಕುಳಾಲು ಶಾರದಾ ಭಜನಾ ಮಂದಿರದಲ್ಲಿ ಬಿಜೆಪಿಯಿಂದ ಆಯುಷ್ಮಾನ್ ಕಾರ್ಡ್ ವಿತರಣೆ

ಜಾಹೀರಾತು

ಬಂಟ್ವಾಳ: ಕುಳಾಲು ದಾಸಗಿರಿ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಆಯುಷ್ಮಾನ್ ಕಾರ್ಡ್ ಉಚಿತ ವಿತರಣೆಯನ್ನು ಬಿಜೆಪಿ ವತಿಯಿಂದ ನಡೆಸಲಾಯಿತು.

ತಾಪಂ ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು ಕಾರ್ಯಕ್ರಮ ಉದ್ಘಾಟಿಸಿದರು. ಕೊಳ್ನಾಡು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಆನೆಯಾಲ, ಪ್ರಧಾನ ಕಾರ್ಯದರ್ಶಿ ಲೋಹಿತ್ ಅಗರಿ, ಬಂಟ್ವಾಳ ರೈತ ಮೋರ್ಚಾದ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಅಗರಿ, ಮಂಕುಡೆ ಬೂತ್ ಸಮಿತಿ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕೊಡಂಗೆ, 221ನೇ ಬೂತಿನ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಾಮತ್, 222ನೇ ಬೂತಿನ ಅಧ್ಯಕ್ಷರಾದ ಚಿನ್ನಪ್ಪ ಗೌಡ, ಪಕ್ಷದ ಹಿರಿಯರಾದ ಆನಂದ ಪೂಜಾರಿ ಕುಳಾಲು, ಚಂದ್ರಹಾಸ ಶೆಟ್ಟಿ ಪಟ್ಲಕೋಡಿ, ಸದಾನಂದ ಶೆಟ್ಟಿ ಅಗರಿ, ನಾಗೇಶ್ ಶೆಟ್ಟಿ ಮಾಡ್ಯಲಮಾರು, ಆನಂದ ಸಾಲ್ಯಾನ್, ಜಗದೀಶ್ ಶೆಟ್ಟಿ ತಡೆಂಗಳ, ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ.) ದಾಸಗಿರಿ – ಕುಳಾಲು ಮತ್ತು ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಪದಾಧಿಕಾರಿಗಳು ಇದ್ದರು. ಈ ವೇಳೆ 318 ಆಯುಷ್ಮಾನ್ ಭಾರತ್ ಫಲಾನುಭವಿಗಳನ್ನು ನೋಂದಾಯಿಸಲಾಯಿತು. ಬಂಟ್ವಾಳ ಮಂಡಲ ಉಪಾಧ್ಯಕ್ಷರಾದ ಜಯರಾಮ್ ನಾಯ್ಕ್ ಕುಂಟ್ರಕಲ ನಿರೂಪಿಸಿದರು. ಕೊಳ್ನಾಡು ಮಹಾಶಕ್ತಿಕೇಂದ್ರದ ಪ್ರಮುಖರಾದ ಶಶಿಧರ್ ರೈ ಕುಳಾಲು ಸ್ವಾಗತಗೈದರು.  222ನೇ ಬೂತ್ ಸಮಿತಿ ಕಾರ್ಯದರ್ಶಿ ಯೋಗೀಶ್ ನಾಯ್ಕ್ ಕುಂಟ್ರಕಲ ಧನ್ಯವಾದಗೈದರು.

ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಬಂಟ್ವಾಳ ರೈತ ಮೋರ್ಚಾದ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕಟ್ಟತ್ತಿಲಕೋಡಿ, ಕೊಳ್ನಾಡು ಪಂಚಾಯತ್ ನ ಮಾಜಿ ಸದಸ್ಯರಾದ ಹರೀಶ್ ಟೈಲರ್ ಮಂಕುಡೆ, ಪಕ್ಷದ ಪ್ರಮುಖರಾದ ಬಾಲಕೃಷ್ಣ ಸೆರ್ಕಳ, ವೇಣುಗೋಪಾಲ್ ಆಚಾರ್ಯ ಮಂಕುಡೆ, ವಿಶ್ವನಾಥ ಪೂಜಾರಿ ನರ್ಕಳ ಭೇಟಿ ನೀಡಿ ಶುಭ ಹಾರೈಸಿದರು. ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ.) ದಾಸಗಿರಿ – ಕುಳಾಲು ಮತ್ತು ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಇದರ ಪದಾಧಿಕಾರಿಗಳು, ಸದಸ್ಯರು ಸಹಕರಿಸಿರುತ್ತಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts