ವಿದ್ಯಾಭಾರತಿಯಿಂದ ಅಖಿಲ ಭಾರತ ಶಿಕ್ಷಾ ಸಂಸ್ಥಾನ್ – ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ

 

ಜಾಹೀರಾತು

ಬಂಟ್ವಾಳ: ಭಾರತ ಸರಕಾರದಿಂದ ಇತ್ತೀಚೆಗೆ ಅಂಗೀಕರಿಸಲ್ಪಟ್ಟಿರುವ ನೂತನರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸಿ ಜನಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿ ಚರ್ಚೆ, ಸಂವಾದ, ಉಪನ್ಯಾಸ ಮುಂತಾದ ಕಾರ್ಯಕ್ರಮಗಳ ಜೊತೆಗೆ ರಾಷ್ಟ್ರೀಯ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ ಎಂದು ವಿದ್ಯಾಭಾರತಿ ಪ್ರಾಂತೀಯ ಕಾರ್ಯದರ್ಶಿ ವಸಂತ ಮಾಧವ ತಿಳಿಸಿದ್ದಾರೆ.

ನೂತನ ಶಿಕ್ಷಣ ನೀತಿಯ ವಿವಿಧತಾತ್ವಿಕ ಆಯಾಮಗಳು ಜನಸಾಮಾನ್ಯರಲ್ಲಿ, ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಣಾಸಕ್ತರಲ್ಲಿ ಚರ್ಚೆಯಾಗಿ ಕಾರ್ಯಾನ್ವಯನವಾಗಬೇಕೆಂಬ ದೃಷ್ಟಿಯಿಂದ ಸಾಮಾಜಿಕ ಜಾಲತಾಣ ಮಾಧ್ಯಮದಲ್ಲಿ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 2ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಾಹೀರಾತು

ಈ ಸ್ಪರ್ಧೆಗಳು ಭಾರತಕೇಂದ್ರಿತ ಶಿಕ್ಷಣ – ಸಮಗ್ರದೃಷ್ಟಿಯ ಶಿಕ್ಷಣ – ಜ್ಞಾನಾಧಾರಿತ ಸಮುದಾಯ ಮತ್ತುಗುಣಮಟ್ಟದ ಶಿಕ್ಷಣ ಈ ನಾಲ್ಕು ಪ್ರಮುಖತಾತ್ವಿಕ ಪರಿಕಲ್ಪನೆಗಳನ್ನು ಒಳಗೊಂಡು ನಡೆಯಲಿದೆ.ದೇಶದ 13 ಬೇರೆ ಬೇರೆ ಭಾಷೆಗಳಲ್ಲಿ  ಮೂರುರೀತಿಯ ಗುಂಪುಗಳಲ್ಲಿ ನಡೆಯುತ್ತಿದೆ. (9ರಿಂದ12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ನಾಗರಿಕರಿಗೆ) ಎಲ್ಲಾ ವಿಜೇತರಿಗೆ ನಗದು ಬಹುಮಾನವನ್ನು ಮತ್ತು ಪ್ರಮಾಣ ಪತ್ರವನ್ನು ಹಾಗೂ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರವನ್ನು ಒದಗಿಸಲಾಗುತ್ತದೆ. ಚಿತ್ರಕಲೆ, ಕಾರ್ಟೂನ್‌ರಚನೆ, ಪ್ರಧಾನಮಂತ್ರಿಯವರಿಗೆ ಪತ್ರ, 2 ನಿಮಿಷದ ಭಾಷಣ, ಪ್ರಬಂಧ ಸ್ಪರ್ಧೆ, 2.20 ನಿಮಿಷದಕಿರುಚಿತ್ರದ ನಿರ್ಮಾಣ, ಡಿಜಿಟಲ್‌ಡಿಸೈನಿಂಗ್ ಹಾಗೂ 8 ಟ್ವಿಟರ್‌ತ್ರೆಡ್  ಅಲ್ಲದೆರಸಪ್ರಶ್ನೆ  ಸ್ಪರ್ಧೆಗಳನ್ನು ಈ ವಿವಿಧ ಗುಂಪುಗಳಿಗೆ 13 ಭಾಷೆಗಳಲ್ಲಿ ಆಯೋಜಿಸಲಾಗುವುದು.

11 ಸೆಪ್ಟೆಂಬರ್ 2020ಕ್ಕೆ ಬಿಡುಗಡೆಯಾಗುವ www.mynep.in ಎಂಬ ವೆಬ್‌ಸೈಟ್‌ನ ಮೂಲಕ ಸ್ಪರ್ಧೆಗಳಿಗೆ ಹೆಸರು ನೊಂದಾಯಿಸಿ ಸೂಚಿಸಿದ ನಿಯಮಗಳಿಗೆ ಅನುಸಾರವಾಗಿತಮ್ಮತಮ್ಮ ಸಾಮಾಜಿಕ ಜಾಲತಾಣಗಳ ಮುಖಾಂತರಎಲ್ಲಾ ಸ್ಪರ್ಧೆಗಳಿಗೆ ಭಾಗವಹಿಸಬಹುದು. ತಮ್ಮ ವಿಭಾಗ ವಿಷಯವಾರು ಸ್ಪರ್ಧೆಗಳನ್ನು ಆಯ್ಕೆಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವಿದ್ಯಾಭಾರತಿ ಕರೆ ನೀಡಿದೆ.

ಜಾಹೀರಾತು

ಈ ನೂತನರಾಷ್ಟ್ರೀಯ ಶಿಕ್ಷಣ ನೀತಿಯು ಒಂದು ವಿಶೇಷ ರೀತಿಯಲ್ಲಿಜನರ ಹಾಗೂ ಸಾಮಾಜಿಕ ಸಂಘಟನೆಗಳ ವಿವಿಧ ಹಂತದಚರ್ಚೆ ಹಾಗೂ ಸಲಹೆಗಳ ಪರಿಣಾಮವಾಗಿರಚನೆಯಾಗಿದ್ದು,ಇದರ ಬಗ್ಗೆ ಯುವಚೈತನ್ಯಪೂರ್ಣ ಸ್ವಯಂಸೇವಕರ ಮೂಲಕ ಸಾರ್ವಜನಿಕ ಜನಜಾಗೃತಿ ನಡೆಯಬೇಕಾಗಿದೆ.  ಜನಜಾಗೃತಿಯ ಕಾರ್ಯಕ್ರಮಗಳ ನಿರ್ವಹಣೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ರಾಯಭಾರಿಗಳನ್ನು ಗುರುತಿಸಿ ನಿಯುಕ್ತಿಗೊಳಿಸಲಾಗುವುದು. ಇದಲ್ಲದೆ, ಶಾಲೆ, ಕಾಲೇಜುಗಳು, ಉನ್ನತ ಶಿಕ್ಷಣದ ವಿದ್ಯಾಕೇಂದ್ರಗಳು ಸಹ ಈ ಅಭಿಯಾನದಲ್ಲಿ ಕೈಜೋಡಿಸಿ ಈ ಶಿಕ್ಷಣ ನೀತಿಯನ್ನು ಬೆಂಬಲಿಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಸಂಕಲ್ಪದಲ್ಲಿ ಭಾಗವಹಿಸಲು ವಿದ್ಯಾಭಾರತಿ ಕರ್ನಾಟಕದ ಪರವಾಗಿ ಪ್ರಾಂತೀಯ ಕಾರ್ಯದರ್ಶಿ ವಸಂತ ಮಾಧವ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿದ್ಯಾಭಾರತಿಯಿಂದ ಅಖಿಲ ಭಾರತ ಶಿಕ್ಷಾ ಸಂಸ್ಥಾನ್ – ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*