ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಮಟ್ಟ ಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದೆ. ಮಂಗಳೂರಿನಲ್ಲಿ ಮನವಿಯನ್ನುಡಿಜಿಪಿ ಪ್ರವೀಣ್ ಸೂದ್ ಹಾಗೂ ಮಂಗಳೂರು ನಗರ ಕಮಿಷನರ್ ವಿಕಾಶ್ ಕುಮಾರ್ ಸ್ವೀಕರಿಸಿದರು.ಎಬಿವಿಪಿಯಿಂದ ವಿಭಾಗ ಸಂಚಾಲಕ ಆಶೀಶ್ ಅಜಿಬೆಟ್ಟು ಹಾಗೂ ಮಂಗಳೂರು ನಗರ ಸಹ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಉಪಸ್ಥಿತರಿದ್ದರು.
ಮನವಿಯಲ್ಲೇನಿದೆ:
ಇಲ್ಲಿನ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ದೊಡ್ಡ ಮಟ್ಟದಲ್ಲಿ ಡ್ರಗ್ಸ್ದಂಧೆ ನಡೆಯುತ್ತಿದೆ. ಕಳೆದ ವರ್ಷಗಳಲ್ಲಿ ಪತ್ತೆಯಾಗಿರುವಗಾಂಜಾ ಪ್ರಕರಣಗಳು ಇದಕ್ಕೆ ಸಾಕ್ಷಿಯಾಗಿವೆ. ಜಿಲ್ಲೆಯ ಪೋಲಿಸ್ ಇಲಾಖೆ 2-3 ದಿನಗಳಿಂದ ನಗರ ಮತ್ತು ಜಿಲ್ಲೆಯಾದ್ಯಂತ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿದೆ. ಆದ್ದರಿಂದ ಪೋಲಿಸರಿಗೆ ಇನ್ನಷ್ಟುದೈರ್ಯ ಮತ್ತು ಆತ್ಮವಿಶ್ವಾಸವನ್ನುತುಂಬುವಂತಹ ಕೆಲಸಗಳು ಪೋಲಿಸ್ ಇಲಾಖೆಯಿಂದ ಆಗಬೇಕು ಯಾವುದೇ ರಾಜಕೀಯ ಪ್ರಭಾವಗಳಿಗೆ ಒಳಗಾಗದೇ ನ್ಸಿಪಕ್ಷಪಾತವಾದ ತನಿಖೆಗಳನ್ನು ಮಾಡಬೇಕೆಂದು ಎಬಿವಿಪಿ ಮನವಿಯಲ್ಲಿ ಹೇಳಿದೆ.