ಬಂಟ್ವಾಳ

ಸೆ.10ರಂದು ಯುವವಾಹಿನಿ ಬಂಟ್ವಾಳದಿಂದ ಬಿ.ತಮ್ಮಯ ಸಂಸ್ಮರಣೆ

ಜಾಹೀರಾತು

ಬಂಟ್ವಾಳ: ಸೆ.10ರಂದು ಯುವವಾಹಿನಿ ಬಂಟ್ವಾಳ ವತಿಯಿಂದ ಕಸಾಪ ಮಾಜಿ ತಾಲೂಕು ಅಧ್ಯಕ್ಷ ಹಾಗೂ ಯುವವಾಹಿನಿಯ ಕೇಂದ್ರ ಸಮಿತಿ ಗೌರವ ಸಲಹೆಗಾರ ಬಿ.ತಮ್ಮಯ ಅವರ ಸಂಸ್ಮರಣೆ ಬಿ.ಸಿ.ರೋಡಿನ ಹೋಟೆಲ್ ಕೃಷ್ಣಿಮಾ ಪಕ್ಕ ಇರುವ ಯುವವಾಹಿನಿ ಭವನದಲ್ಲಿ ನಡೆಯಲಿದೆ.

ಜಾಹೀರಾತು

ಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಧ್ಯಕ್ಷರಾಗಿ ,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಕೇಂದ್ರ ಸಮಿತಿಯ ಗೌರವ ಸಲಹೆಗಾರರಾಗಿ, ಬಂಟ್ವಾಳ ತಾಲೂಕು ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿ, ತುಳುಲಿಪಿಯ .ಶಿಕ್ಷಕರಾಗಿ  ಹತ್ತು ಹಲವಾರು ಸಂಸ್ಥೆಗಳಲ್ಲಿ ನಾಯಕತ್ವ, ಮಾರ್ಗದರ್ಶನ ಹಾಗೂ ಸ್ನೇಹ ಜೀವಿಯಾಗಿ ದುಡಿದ.ಬಿ ತಮ್ಮಯ ಅವರ ಸಂಸ್ಮರಣೆ ಗುರುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಈ ಕುರಿತು ಸಿದ್ಧತಾ ಸಭೆಯೊಂದು ಯುವವಾಹಿನಿ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಂಟ್ವಾಳ ತಾಲೂಕು ಘಟಕದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಘಟಕದ ಮಾಜಿ ಅಧ್ಯಕ್ಷರಾದ ಬಿ. ಶ್ರೀಧರ ಅಮೀನ್ ಲೋಕೇಶ್ ಸುವರ್ಣ, ಅರುಣ್ ಕುಮಾರ್ ಘಟಕದ ಕಾರ್ಯದರ್ಶಿಗಳಾದ ಪುರುಷೋತ್ತಮ ಕಾಯರ್ ಪಲ್ಕೆ, ಕೋಶಾಧಿಕಾರಿ ಗಣೇಶ್ ಪೂಜೆರೆ ಕೊಡಿ, ನಿರ್ದೇಶಕರಾದ ಸುನಿಲ್  ಮರ್ದೊಳಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ