ಬಂಟ್ವಾಳ

ಬ್ರಾಹ್ಮಣ ಪುರೋಹಿತ, ಅರ್ಚಕರ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ, ಚಿಂತನ-ಮಂಥನ

www.bantwalnews.com ನೀಡುವ ಮತ್ತಷ್ಟು ಸುದ್ದಿಗಳನ್ನು ನಿರಂತರ ಪಡೆಯಲು ಈ ವಾಟ್ಸಾಪ್ ಗುಂಪನ್ನು ಸೇರಬಹುದು.

https://chat.whatsapp.com/K7IFcPCl7vR0dzpr8EOgYD

ಜಾಹೀರಾತು

ಬಂಟ್ವಾಳ: ಅಖಿಲ ಕರ್ನಾಟಕ ಬ್ರಾಹ್ಮಣ ಪುರೋಹಿತ ಮತ್ತು ಅರ್ಚಕರ ಪರಿಷತ್ ( ರಿ.) ಬಂಟ್ವಾಳ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಚಿಂತನ ಮಂಥನ  ಬಂಟ್ವಾಳ ಬ್ರಾಹ್ಮಣ ಪರಿಷತ್ ಕಟ್ಟಡದಲ್ಲಿ  ನಡೆಯಿತು.

ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಕೃಷ್ಣರಾಜ ಭಟ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ  ನಿರ್ದೇಶಕರು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಜೇಶ್ ನಡ್ವಂತ್ತಿಲ್ಲಾಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಇನ್ನೊರ್ವ ನಿರ್ದೇಶಕರು, ಅಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತಿನ  ಹಿರಿಯ ಉಪಾಧ್ಯಕ್ಷರಾದ ಡಾ ವೇ.ಮೂ ಬಿ.ಎಸ್ .ರಾಘವೇಂದ್ರ ಭಟ್  ಪರಿಷತ್ತಿನ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿದರು.

ಜಿಲ್ಲಾ ಪದಾಧಿಕಾರಿಗಳಾದ ವೇ.ಮೂ. ಕೃಷ್ಣ ಉಪಾಧ್ಯಾಯ, ವೇ.ಮೂ. ಹರಿ ಉಪಾಧ್ಯಾಯ, ರಾಘವೇಂದ್ರ ಹೊಳ್ಳ, ಶಿಬರೂರು ಅನಂತಪದ್ಮನಾಭ ಆಚಾರ್ಯ, ಧಾರ್ಮಿಕ ಪರಿಷತ್ ಸದಸ್ಯರಾದ  ಕಶೆಕೋಡಿ ಸೂರ್ಯನಾರಾಯಣ ಭಟ್, ಜಿಲ್ಲಾ  ಧಾರ್ಮಿಕ ಪರಿಷತ್ ಸದಸ್ಯರು ಹಾಗೂ ವಿವಿಧ ಪ್ರಮುಖರಾದಪೊಳಲಿ ಗಿರಿಪ್ರಕಾಶ್ ತಂತ್ರಿ, ಡಾ.ಸತ್ಯಕೃಷ್ಣ ಭಟ್, ಶಂಕರನಾರಾಯಣ ಶರ್ಮಾ, ಪ್ರಶಾಂತ್ ಗೋರೆ, ಸುಬ್ರಹ್ಮಣ್ಯ ಭಟ್,  ಶಿವರಾಮ ಮಯ್ಯ, ಈಶ್ವರ ಭಟ್, ಶ್ರೀನಿಧಿ ಮುಚ್ಚಿನ್ನಾಯ, ಪೈಕ ವೆಂಕಟ್ರಮಣ ಭಟ್, ರಾಜಗೋಪಾಲ ಆಚಾರ್ಯ, ಸುದರ್ಶನ ಬಲ್ಲಾಳ್, ರಾಘವೇಂದ್ರ ರಾವ್, ಬಾಲಕೃಷ್ಣ ಕಾರಂತ, ಕೆ ವಾಸುದೇವ ಭಟ್ ಮೊದಲಾದವರು ಇದ್ದರು.

ಈ ಸಂದರ್ಭದಲ್ಲಿ ಮೀಸಲಾತಿ, ಜಾತಿ ಪ್ರಮಾಣ ಪತ್ರ, ಸಂಘಟನೆ, ಸರಕಾರದ ಅನುದಾನ ಸದ್ಬಳಕೆ ಮೊದಲಾದ ವಿಷಯಗಳ ಕುರಿತು ಚಿಂತನ ಮಂಥನ, ವಿವಿಧ ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.