ಬಂಟ್ವಾಳ

ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ

ಜಾಹೀರಾತು

ಬಂಟ್ವಾಳ: ಗುರುವಾರ ರಾತ್ರಿಯಿಂದೀಚೆಗೆ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ ಸಂಭವಿಸಿದೆ. ಕೆಲವೆಡೆ ಮಣ್ಣು ಕುಸಿದರೆ, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳು ಉರುಳಿವೆ. ಇನ್ನು ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳು ತುಂಬಿ ವಾಹನ ಸವಾರರು ಪರದಾಟ ಅನುಭವಿಸುವ ಸ್ಥಿತಿಯೂ ನಿರ್ಮಾಣವಾಯಿತು.

ಸಜೀಪನಡು ಗ್ರಾಮದ ಬೊಳಿಮೆ ಎಂಬಲ್ಲಿ ಉಮಾವತಿ ಎಂಬವರ ಮನೆ ಪೂರ್ಣ ಹಾನಿಯಾಗಿದ್ದರೆ, ಬಾಳೆಪುಣಿ ಗ್ರಾಮದ ಕಣಂತೂರು ಎಂಬಲ್ಲಿ ಗುಡ್ಡ ಜರಿದು ನೆರೆನೀರು ತೋಟಕ್ಕೆ ನುಗ್ಗಿದೆ.

ಜಾಹೀರಾತು

ನರಿಕೊಂಬು ಗ್ರಾಮದ ಹಮೀದ್ ಮನೆಪಕ್ಕ ಗುಡ್ಡ ಕುಸಿದರೆ, ಸಜಿಪಪಡು ಗ್ರಾಮದ ಸೋಮನಾಥ್ ಮೂಲ್ಯ ಅವರ ಭತ್ತದ ಗದ್ದೆಗೆ ನೀರು ನುಗ್ಗಿ ಹಾನಿಯಾಗಿದೆ. ವಿಟ್ಲ ಕಸಬ ಗ್ರಾಮದ ಸೇರಾಜೆ ಎಂಬಲ್ಲಿ ಮನೆಗೆ ಹಾನಿಯಾಗಿದ್ದರೆ, ಸಜಿಪಮುನ್ನೂರು ಗ್ರಾಮದ ನಂದಾವರದ ಮಹಮ್ಮದ್ ಆರಿಫ್ ಎಂಬವರ ಮನೆಗೆ ಹಾನಿಯಾಗಿದೆ. ಒಟ್ಟು 3 ಮನೆಗಳಿಗೆ ಹಾನಿಯಾಗಿದ್ದರೆ, 0.25 ಹೆಕ್ಟೇರ್ ಅಡಕೆ ತೋಟ ಮತ್ತು 0.25 ಹೆಕ್ಟೇರ್ ಭತ್ತದ ಕೃಷಿಗೆ ಹಾನಿ ಸಂಭವಿಸಿದೆ ಎಂದು ಕಂದಾಯ ಇಲಾಖೆ ಕಚೇರಿ ಮಾಹಿತಿ ತಿಳಿಸಿದೆ. ಬಿಸಿರೋಡು ಕೋಣಾಜೆ ರಾಜ್ಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಮೆಸ್ಕಾಂ ಇಲಾಖೆಗೆ ಸೇರಿದ ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ನಾಲ್ಕು ವಿದ್ಯುತ್ ಕಂಬಗಳು ಬೀಳುವ ಹಂತದಲ್ಲಿ ವಾಲಿ ನಿಂತಿದ್ದು ತಂತಿಗಳು ಕಡಿದು ಬಿದ್ದ ಘಟನೆ ಗುರುವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ. ಬಳಿಕ ಈ ಭಾಗದ ಒಟ್ಟು ಆರು ಟ್ರಾನ್ಸ್ ಫಾರ್ಮರ್ ಗಳ ವಿದ್ಯುತ್ ಸಂಪರ್ಕ ಕಡಿತಮಾಡಲಾಗಿಯಿತು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ