ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ವತಿಯಿಂದ ನಡೆದ ‘ಶಿಕ್ಷಕರ ದಿನಾಚರಣೆ ಗುರುವಂದನಾ ಕಾರ್ಯಕ್ರಮ ಸಂದರ್ಭ ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಗೀತ ಶರ್ಮ, ಇಸ್ಮಾಯಿಲ್ ಕೆ. ಹಾಗೂ ರಾಧಾಕೃಷ್ಣ ಬಾಳಿಗಾ ಅವರನ್ನು ಲಯನ್ಸ್ ಉಪ ಜಿಲ್ಲಾ ಗವರ್ನರ್ ವಸಂತ ಕುಮಾರ್ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ಲಯನ್ಸ್ ನಿರ್ಮಲ ಹೃದಯ ವಿಶೇಷ ಶಾಲೆ ಏಳಿಗೆಗೆ ಶ್ರಮ ವಹಿಸುತ್ತಿರುವ ಗಣೇಶ್ ಪಜೀರ್ ಮತ್ತು ರವೀಂದ್ರ ಕೆ. ಹಾಗೂ ಸಾಧಕ ವಿಶೇಷ ವಿದ್ಯಾರ್ಥಿ ಕೌಶಿಕ್ ಆಚಾರ್ಯ ಮತ್ತು ಎಸ್.ಎಸ್.ಎಲ್.ಸಿ., ಪಿ.ಯು.ಸಿ.ಯಲ್ಲಿ ಕನ್ನಡ, ಇಂಗ್ಲೀಷ್ ಮಾಧ್ಯಮದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಧ್ಯಕ್ಷರಾದ ಕೃಷ್ಣಶ್ಯಾಮ್ ಎಂ., ವಲಯಾಧ್ಯಕ್ಷ ಶ್ರೀನಿವಾಸ ಪೂಜಾರಿ, ಸ್ಥಾಪಕ ಸದಸ್ಯ ಡಾ. ಎಂ. ಶ್ಯಾಮ್ ಭಟ್, ಲಯನ್ಸ್ ವಿಶೇಷ ಶಾಲಾ ಸಂಚಾಲಕ ದಾಮೋದರ ಬಿ.ಎಂ., ಕಾರ್ಯದರ್ಶಿ ಕೆ. ವೈಕುಂಠ ಕುಡ್ವ, ಖಜಾಂಚಿ ದಿಶಾ ಆಶೀರ್ವಾದ್, ಶಿಕ್ಷಣ ಸಂಯೋಜಕಿ ಸುಜಾತ ರವಿಶಂಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…