ಬಂಟ್ವಾಳ

ಬಂಟ್ವಾಳ ತಾಲೂಕು ಕಚೇರಿ ಶಿರಸ್ತೇದಾರ್ ರಾಧಾಕೃಷ್ಣ ನಿಧನ

ಬಂಟ್ವಾಳ: ಕಳೆದ ಒಂದೂವರೆ ವರ್ಷದಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಧಾಕೃಷ್ಣ. ಕೆ. (50) ಅವರು ಹೃದಯಾಘಾತದಿಂದ ಶನಿವಾರ ಮುಂಜಾನೆ ಬಿ.ಸಿ.ರೋಡಿನಲ್ಲಿ ನಿಧನ ಹೊಂದಿದರು. ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗುವನ್ನು ಅವರು ಅಗಲಿದ್ದಾರೆ. ಮೂಲತಃ ಶಿರ್ತಾಡಿಯವರಾಗಿದ್ದ ಅವರು ಸಕಲೇಶಪುರದಲ್ಲಿ ಕರ್ತವ್ಯ ಸಲ್ಲಿಸಿ, ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಬಳಿಕ ಹಾಸನದಿಂದ ಸಾಮಾಜಿಕ ಭದ್ರತೆ ವಿಭಾಗದ ಶಿರಸ್ತೇದಾರ್ ಆಗಿ ಕರ್ತವ್ಯಕ್ಕೆ ಭಡ್ತಿ ಹೊಂದಿ ಬಂಟ್ವಾಳ ತಾಲೂಕು ಕಚೇರಿಗೆ ಕಳೆದ ಒಂದೂವರೆ ವರ್ಷಗಳ ಹಿಂದೆ ಆಗಮಿಸಿದ್ದರು. ಅವರು ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಆಗಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃದುಭಾಷಿಯಾಗಿದ್ದು, ಎಲ್ಲರೊಂದಿಗೆ ಬೆರೆಯುತ್ತಿದ್ದ ಅವರ ಅಂತಿಮ ದರ್ಶನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಸಹಾಯಕ ಕಮೀಷನರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್. ಸಹಿತ ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗ, ಸರ್ಕಾರಿ ನೌಕರರ ಸಂಘದ ಸದಸ್ಯರು ಅಂತಿಮ ದರ್ಶನ ಪಡೆದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts