ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆ: ಕಾಂಗ್ರೆಸ್ ನಿಂದ ರೈ ನೇತೃತ್ವದಲ್ಲಿ ಮನವಿ ಸಲ್ಲಿಕೆ

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸದಸ್ಯರ ವಾರ್ಡ್ ನಲ್ಲಿ ಅಭಿವೃದ್ಧಿ ಕಡೆಗಣನೆ, ಚುನಾಯಿತ ಜನಪ್ರತಿನಿಧಿಗಳಿಗೆ ಅಧಿಕಾರವಿಲ್ಲದೇ ಇರುವುದು, ನಿರ್ಮಲ ಬಂಟ್ವಾಳ ಯೋಜನೆಯಡಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಸ್ಥಗಿತಗೊಂಡಿರುವುದು, ಕುಡಿಯುವ ನೀರು ಒದಗಿಸಲು ವಿಫಲವಾಗಿರುವುದು, ನೀರಿನ ಬಿಲ್ಲಿನಲ್ಲಿ ಏರಿಕೆಯಾಗಿರುವುದನ್ನು ಪ್ರಸ್ತಾಪಿಸಿದ ಅವರು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಬಂಟ್ವಾಳ ಬ್ಲಾಕ್  ಕಾಂಗ್ರೆಸ್ ಅದ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಸುಧೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್. ಮಹಮ್ಮದ್, ತಾಲೂಕ್  ಪಂಚಾಯತ್ ಉಪಾಧ್ಯಕ್ಷ  ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ವಾಸು ಪುಜಾರಿ ಲೊರೆಟ್ಟೊ, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ, ಮೊಹಮ್ಮದ್ ನಂದರಬೆಟ್ಟು, ಜೆಸಿಂತಾ ಡಿ,ಸೋಜ, ಗಾಯತ್ರಿ ಪ್ರಕಾಶ್, ಲುಕ್ಮಾನ್, ಮಹಮ್ಮದ್ ಶರಿಫ್,  ಅಬೂಬಕ್ಕರ್ ಸಿಧ್ದೀಕ್. ಮುಖಂಡರಾದ ಜಗದೀಶ್ ಕೊಯಿಲ, ಪದ್ಮನಾಭ ರೈ, ಚಿತ್ತರಂಜನ್ ಶೆಟ್ಟಿ, ಮದುಸೂಧನ್ ಶೆಣೈ, ಪದ್ಮಸ್ಮಿತ್, ಅಮ್ಮು ಅರಬಿಗುಡ್ಡೆ, ವೆಂಕಪ್ಪ ಪೂಜಾರಿ, ರಪೀಕ್ ಪಲ್ಲಮಜಲು, ವಿನೋದ್‌ರಾಜ್ ಕೊಯಿಲ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆ: ಕಾಂಗ್ರೆಸ್ ನಿಂದ ರೈ ನೇತೃತ್ವದಲ್ಲಿ ಮನವಿ ಸಲ್ಲಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*