ಕಲ್ಲಡ್ಕ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೋಷಕರ ಸಭೆ

ಜಾಹೀರಾತು

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋವಿಡ್೧೯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಥರ್ಮಲ್ ಸ್ಕ್ರೀನಿಂಗ್ ನಡೆಸಿ ಕಾರ್ಯಕ್ರಮವನ್ನು  ಪ್ರಾರಂಭಿಸಲಾಯಿತು.

 ಪ್ರಾಸ್ತಾವಿಕ ಮಾತುಗಳ್ನಾಡಿದ ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್ ಕೋವಿಡ್೧೯ ಕಾರಣದಿಂದ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಮಯದಲ್ಲಿ ಅಮೂಲ್ಯವಾದ ಶೈಕ್ಷಣಿಕ ವರ್ಷವು ವ್ಯರ್ಥವಾಗದಂತೆ, ಮಕ್ಕಳ ಕಲಿಕೆಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಶಿಕ್ಷಣವನ್ನು ಮಕ್ಕಳಿಗೆ ತಲುಪಿಸುವ ಅಗತ್ಯವಿರುವ ಕಾರಣ ಮೊಬೈಲ್ ಶಿಕ್ಷಣದ ಮೊರೆಹೋಗಬೇಕಾಗಿರುವುದು ಅನಿವಾರ್ಯವಾಗಿದೆ. ಆದ್ದರಿಂದ ಪೂರ್ಣತೆಯನ್ನು ಸಾಧಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಎಂದರು.

  ಪೋಷಕರ ಪರವಾಗಿ ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಮೋಹನ್ ಪಿ.ಎಸ್. ಮಾತನಾಡಿ ಮಕ್ಕಳ ಅಭ್ಯುದಯದ  ಹೊಣೆಯನ್ನು ಶಿಕ್ಷಕರು ಮಾತ್ರವಲ್ಲದೆ ಪೋಷಕರೂ ಹೊರಬೇಕಾಗಿರುವ ಅನಿವಾರ್ಯತೆಯಿದೆ. ಆದ್ದರಿಂದ ಶಿಕ್ಷಕರ ಹಾಗೂ ಆಡಳಿತ ಮಂಡಳಿಯ ಪ್ರಯತ್ನಕ್ಕೆ ಪೋಷಕರು ಪೂರಕವಾಗಿ ಸ್ಪಂದಿಸಬೇಕು. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನಡೆಯುತ್ತಿರುವ ಪ್ರಯತ್ನದಲ್ಲಿ ನಾವೆಲ್ಲರೂ ಶಿಕ್ಷಕರ ಜೊತೆ ಕೈ ಜೋಡಿಸೋಣ ಎಂದರು.

 ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ಮಾತನಾಡಿ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ತರ ವಿಷಯಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು.

೨೦೧೯೨೦ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೧೭ ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾದ ಪ್ರಣಮ್ಯಾ ಪಿ.ಶೆಟ್ಟಿ ಯನ್ನು ಶಾಲಾ ಶಿಕ್ಷಕರಕ್ಷಕ ಸಂಘದ ವತಿಯಿಂದ ಶಾಲು ಹೊದಿಸಿ, ನಗದು ಬಹುಮಾನದೊಂದಿಗೆ ಸನ್ಮಾನಿಸಲಾಯಿತು. ವಿಶಿಷ್ಟ ಶ್ರೇಣಿಯನ್ನು ತಮ್ಮದಾಗಿಸಿಕೊಂಡ ಎಲ್ಲಾ ಪ್ರತಿಭೆಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಶಾಲಾ ಸಂಚಾಲಕರಾದ ಪ್ರಹ್ಲಾದ್ ಜೆ. ಶೆಟ್ಟಿ ಮಾತನಾಡಿ ಪೋಷಕರು  ತಮ್ಮ ಮಕ್ಕಳ ಶೈಕಣಿಕ ಪ್ರಗತಿಯ ಬಗ್ಗೆ ಗಮನಹರಿಸಬೇಕು. ಶಾಲೆ ಪ್ರಾರಂಭವಾಗುವವರೆಗೆ  ಮಕ್ಕಳಿಗೆ ಹಮ್ಮಿಕೊಂಡಿರುವ ಪರ್ಯಾಯ ಶಿಕ್ಷಣ ವ್ಯವಸ್ಥೆಗೆ ಎಲ್ಲರೂ ಸ್ಪಂದಿಸಬೇಕು ಎಂದರು.ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೊಂಬಿಲ ನಾರಾಯಣ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಂಜುಳಾ ಎಚ್.ಗೌಡ ಹಾಗೂ ಸುಧಾ ಎನ್. ರಾವ್ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷೆ ಕಸ್ತೂರಿ.ಪಿ.ಶೆಟ್ಟಿ ಸ್ವಾಗತಿಸಿದರು. ಯಜ್ಞೇಶ್ವರಿ ಶೆಟ್ಟಿ ಕಾರ್ಯಕ್ರಮ  ನಿರೂಪಿಸಿದರು. ದಿನಕರ್ ಪೂಜಾರಿ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.