ಸಮುದಾಯಗಳ ಸಾಂಸ್ಕೃತಿಕ ದಾಖಲಾತಿ ಅಗತ್ಯ – ಹರಿಕೃಷ್ಣ ಪುನರೂರು

ಜಾಹೀರಾತು

ಮಂಗಳೂರು: ಪ್ರತಿಯೊಂದು ಸಮುದಾಯವೂ ವಿಶಿಷ್ಟವಾದ ಪರಂಪರೆಗಳನ್ನು ಹೊಂದಿದ್ದು ಅವುಗಳ ದಾಖಲಾತಿಯು ಅನನ್ಯವಾದ ಸಾಂಸ್ಕೃತಿಕ ಅಧ್ಯಯನಕ್ಕೆ ಹಾದಿ ಮಾಡಿ ಕೊಡುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.

ನಗರದ ಸಾಹಿತ್ಯಿಕ ಸಾಂಸ್ಕೃತಿಕ ಸಂಸ್ಥೆ ’ಭೂಮಿಗೀತವೇದಿಕೆಯು ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಖ್ಯಾತ ಕವಿ, ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರ ಚಿಂತನ ಹಾಗೂ ಸಂಸ್ಕೃತಿ ಸಂಕಥನಗಳನ್ನೊಳಗೊಂಡ ನೂತನ ಕೃತಿ ’ಅಮೃತ ಹಂಚುವ ಕೆಲಸಬಿಡುಗಡೆಗೊಳಿಸಿ ಅವರು ಮಾತಾಡುತ್ತಿದ್ದರು.

ಹಲವು ಸಮುದಾಯಗಳು ಸೇರಿ ಬೃಹತ್ ರೂಪದ ಸಮಾಜ ನಿರ್ಮಾಣವಾಗಿದೆ. ಆದರೆ ವಿವಿಧ ಸಮುದಾಯಗಳಲ್ಲಿ ಅಡಗಿರುವ ವೈಶಿಷ್ಟ್ಯಗಳ ಬಗ್ಗೆ ಹಲವರಿಗೆ ತಿಳಿದಿರುವುದಿಲ್ಲ. ನಮ್ಮ ಸಮಾಜ ಇಂದು ಬದಲಾವಣೆಯ ಸಂಧಿಘಟ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಸಮುದಾಯಗಳ ಸಣ್ಣ ಸಣ್ಣ ಸಾಂಸ್ಕೃತಿಕ ವಿವರಗಳ ದಾಖಲಾತಿಯು ಚರಿತ್ರೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದು ಎಂದು ಅವರು ಹೇಳಿದರು.

ಡಾ. ಪೆರ್ಲ ಅವರು ಆಳವಾದ ಒಳನೋಟಗಳಿರುವ ಓರ್ವ ಕವಿ, ಸಾಹಿತಿಯಾಗಿದ್ದು, ಇದುವರೆಗೆ ದಾಖಲಾಗದೇ ಇರುವ ಸಮಾಜದ ಹಲವು ಒಳಸಂಗತಿಗಳ ಬಗ್ಗೆ ಅಮೂಲ್ಯವಾದ ವಿಚಾರಗಳನ್ನು ಈ ಕೃತಿಯಲ್ಲಿ ಅನನ್ಯವಾಗಿ ಕಟ್ಟಿಕೊಟ್ಟಿದ್ದಾರೆ. ಮುಂದಿನ ತಲೆಮಾರಿಗೆ ಈ ವಿಚಾರಗಳು ಅತ್ಯಮೂಲ್ಯ ಅನ್ನಿಸಲಿದ್ದು, ಇದೊಂದು ಸಂಗ್ರಹಯೋಗ್ಯ ಕೃತಿಯಾಗಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಯಕ್ಷಗಾನ ಕಲಾವಿದ ಸೂರಿಕುಮೇರಿ ಗೋವಿಂದ ಭಟ್ ಹೇಳಿದರು.

ಅಮೃತ ಹಂಚುವುದೆಂದರೆ ಜ್ಞಾನದಾನ ಮಾಡುವ ಅಪೂರ್ವ ಕೆಲಸ. ಕೊರೋನಾ ಕಾಲದ ಧ್ಯಾನಸ್ಥ ಸ್ಥಿತಿಯಲ್ಲಿ ನೆನಪುಗಳ ಕೋಶದಿಂದ ಮತ್ತು ಜೀವನಾನುಭವದ ಹಿನ್ನೆಲೆಯಿಂದ ಮೂಡಿ ಬಂದ ಅಪೂರ್ವವಾದ ಬದುಕಿನ ಸಂಗತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದು ಪ್ರಕಟಿಸಿದ್ದು ಬಹು ಜನಪ್ರಿಯವಾದವು. ಸಾಹಿತ್ಯ ಎಂದರೆ ಸಮಕಾಲೀನ ಇತಿಹಾಸವೂ ಹೌದು. ಅಂತಹ ಬರಹಗಳನ್ನು ದಾಖಲಾತಿಯ ದೃಷ್ಟಿಯಿಂದ ಪುಸ್ತಕರೂಪದಲ್ಲಿ ಪ್ರಕಟಿಸಲಾಗಿದೆ ಎಂದು ಕೃತಿಕಾರರಾದ ಡಾ. ವಸಂತಕುಮಾರ ಪೆರ್ಲ ಹೇಳಿದರು. ವಿದುಷಿ ಅರ್ಥಾ ಪೆರ್ಲ ಸ್ವಾಗತಿಸಿ ನಿರೂಪಿಸಿದರು. ಪ್ರಕಾಶಕಿ ಹಾಗೂ ’ಭೂಮಿಗೀತ’ ಸಂಸ್ಥೆಯ ಸಂಚಾಲಕಿ ಕೆ. ಶೈಲಾಕುಮಾರಿ ವಂದಿಸಿದರು. ವಿದುಷಿ ಅಯನಾ ಪೆರ್ಲ, ನಂದಳಿಕೆ ಬಾಲಚಂದ್ರ ರಾವ್ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಮುದಾಯಗಳ ಸಾಂಸ್ಕೃತಿಕ ದಾಖಲಾತಿ ಅಗತ್ಯ – ಹರಿಕೃಷ್ಣ ಪುನರೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*