ಬಂಟ್ವಾಳ: ಮರಳು ದರ ಕಡಿಮೆ ಮಾಡಿ ಜನರಿಗೆ ಕೈಗೆಟಕುವ ದರದಲ್ಲಿ ಮರಳು ಸಿಗುವಂತೆ ಜನಪರ ಮರಳು ನೀತಿ ರೂಪಿಸುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಮಾತನಾಡಿ ಬಡವರು ಮನೆ ಅಥವಾ ಇನ್ನಿತರ ಕಟ್ಟಡ ನಿರ್ಮಿಸಲು ದುಬಾರಿ ಮರಳು ಅಡ್ಡಿಯಾಗುತ್ತಿದೆ. ಸರಿಯಾದ ಮರಳು ನೀತಿಯಿಲ್ಲದೆ ಜನ ಸಾಮಾನ್ಯರು ಸಂಕಷ್ಟ ಪಡುವಂತಾಗಿದೆ ಎಂದರು.
ಸಮಿತಿಯ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ, ಕಾರ್ಯದರ್ಶಿ ಬಿ.ಶೇಖರ್, ಪ್ರಮುಖರಾದ ಹಾರೂನ್ ರಶೀದ್, ಲೋಲಾಕ್ಷ ಶೆಟ್ಟಿ, ಪ್ರಕಾಶ್ ಶೆಟ್ಟಿ ತುಂಬೆ, ಶರೀಫ್ ಮದ್ವ, ಇಸ್ಮಾಲಿ ಅರಬಿ, ಸಮದ್ ಕೈಕಂಬ, ಮಹಮ್ಮದ್ ನಂದಾವರ, ಆರೀಫ್ ಗೂಡಿನ ಬಳಿ, ಸಾಧಿಕ್ ಗೂಡಿನ ಬಳಿ, ಶ್ರೀನಿವಾಸ ಭಂಡಾರಿ, ಪ್ರೇಮನಾಥ ಕೆ. ಸುರೇಶ್ ಬಂಟ್ವಾಳ್ ಸ್ವಾಗತಿಸಿ, ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸ್ಪಷ್ಟ ಮರಳು ನೀತಿ ರೂಪಿಸಿ: ಸಮಾನ ಮನಸ್ಕ ಸಮನ್ವಯ ಸಂಘಟನೆಗಳ ಮನವಿ"
Be the first to comment on "ಸ್ಪಷ್ಟ ಮರಳು ನೀತಿ ರೂಪಿಸಿ: ಸಮಾನ ಮನಸ್ಕ ಸಮನ್ವಯ ಸಂಘಟನೆಗಳ ಮನವಿ"