ತೋಟಗಾರಿಕಾ ಮಿಷನ್ ಸಹಯೋಗದಲ್ಲಿ ಸೌರಶಾಖಪೆಟ್ಟಿಗೆ ನಿರ್ಮಾಣ

ಜಾಹೀರಾತು

ರಾಷ್ಟ್ರೀಯ ತೋಟಗಾರಿಕಾ ಮಿಷನ್ ಸಹಯೋಗದಲ್ಲಿ ಕಳ್ಳಿಗೆ ಗ್ರಾಮದ ಕೆ. ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರ ತೋಟದಲ್ಲಿ ನಿರ್ಮಿಸಲಾದ ಸೌರ ಶಾಖ ಪೆಟ್ಟಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸೌರ ಶಾಖ ಪೆಟ್ಟಿಗೆಯನ್ನು ಫಲಾನುಭವಿ ಕೃಷಿಕ ಭುವನೇಶ್ ಪಚ್ಚಿನಡ್ಕ ಅವರಿಗೆ ಹಸ್ತಾಂತರ ಮಾಡಿದರು.

ಜಾಹೀರಾತು

ವ್ಯವಸ್ಥಾಪಕ ಹಾಗೂ ತೆಂಗು ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಜಾ ಬಂಟ್ವಾಳ್ ಸೌರ ಶಾಖ ಪೆಟ್ಟಿಗೆ ಮಹತ್ವವನ್ನು ವಿವರಿಸಿ ಇದರಲ್ಲಿ ತೆಂಗು, ಅಡಿಕೆ, ಕಾಳು ಮೆಣಸು, ಶುಂಠಿ, ಅರಿಶಿನ, ಹಣ್ಣು ಹಂಪಲು, ಬೀಜ ಸಂಗ್ರಹಕ್ಕಾಗಿ ತರಕಾರಿ, ಕೃಷಿ ಉತ್ಪನ್ನ ವಸ್ತುಗಳು, ಗಿಡ ಮೂಲಿಕೆ ಔಷಧೀಯ ಸಸ್ಯಗಳನ್ನು ಒಣಗಿಸುವ ವ್ಯವಸ್ಥೆಯನ್ನು ವೈಜ್ಞಾನಿಕ ಕ್ರಮದಲ್ಲಿ ಮಾಡುವುದು. ಇದರಿಂದ ಉತ್ಪನ್ನವು ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಸಮಯದ ಉಳಿತಾಯ, ಕನಿಷ್ಠ ಖರ್ಚು ವೆಚ್ಚ, ಕ್ರಿಮಿ ಕೀಟಗಳಿಂದ ರಕ್ಷಣೆಯು ಒದಗುವುದು ಎಂದರು.

ಶಾಖ ಪೆಟ್ಟಿಗೆಯು 50 ಅಡಿ ಉದ್ದ, 12.5 ಅಡಿ ಅಗಲ, 11 ಅಡಿ ಎತ್ತರ ಇರುವಂತೆ ನಿರ್ಮಾಣ ಮಾಡಲಾಗಿದೆ. ಒಳ ಭಾಗದಲ್ಲಿ 6 ಟ್ರಾಲಿ, 96 ಟ್ರೇಗಳು ಮತ್ತು 4 ಹೀಟರ್‌ಗಳು 4 ಟರ್ಬೊ ವೆಂಟೀಲೇಟರ್‌ಗಳು ಹಾಗೂ ಎಕ್ಸಾಸ್ಟ್ ಫ್ಯಾನ್‌ಗಳು ಅಳವಡಿಸವಾಗಿದೆ. ಒಳ ಭಾಗದ ಉಷ್ಣಾಂಶವನ್ನು ನಿಯಂತ್ರಿಸಲು ಸ್ವಯಂ ಚಾಲಿತ ವ್ಯವಸ್ಥೆ ಇರುವುದು. ವಿದ್ಯುತ್ ಸಂಪರ್ಕ ಕಡಿತವಾದಲ್ಲಿ  ಹೆಚ್ಚುವರಿ 1 ಕಿ.ವ್ಯಾಟ್ ಸೌರ ಶಕ್ತಿ ವಿದ್ಯುತ್ ಸಂಪರ್ಕವನ್ನು ಪ್ರತ್ಯೇಕವಾಗಿ ಅಳವಡಿಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಒಟ್ಟು ಮೂರು ಇಂತಹ ಘಟಕಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಸ್ಥಾಪಿಸಲಾಗಿದೆ ಎಂದರು.

ಶಾಖ ಪೆಟ್ಟಿಗೆ ನಿರ್ಮಾಣಕ್ಕೆ 6.31 ಲಕ್ಷ ರೂ. ವೆಚ್ಚ ಆಗುತ್ತಿದ್ದು 2.28 ಲಕ್ಷ ರೂ. ಸಹಾಯ ಧನ ತೋಟಗಾರಿಕಾ ಇಲಾಖೆಯಿಂದ ನೀಡಲಾಗುತ್ತದೆ. ಶಾಖ ಪೆಟ್ಟಿಗೆಯ ನಿರ್ಮಾಪಕ ಎಸ್.ಆರ್.ಬಿ. ಇಂಡಸ್ಟ್ರೀಸ್ ಮಾಲಕ ರವೀಂದ್ರ ಆರ್., ತೆಂಗು ಸೌಹಾರ್ದ ಸಹಕಾರಿಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಿತ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತೋಟಗಾರಿಕಾ ಮಿಷನ್ ಸಹಯೋಗದಲ್ಲಿ ಸೌರಶಾಖಪೆಟ್ಟಿಗೆ ನಿರ್ಮಾಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*