ಬಂಟ್ವಾಳ

ತೋಟಗಾರಿಕಾ ಮಿಷನ್ ಸಹಯೋಗದಲ್ಲಿ ಸೌರಶಾಖಪೆಟ್ಟಿಗೆ ನಿರ್ಮಾಣ

ಜಾಹೀರಾತು

ರಾಷ್ಟ್ರೀಯ ತೋಟಗಾರಿಕಾ ಮಿಷನ್ ಸಹಯೋಗದಲ್ಲಿ ಕಳ್ಳಿಗೆ ಗ್ರಾಮದ ಕೆ. ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರ ತೋಟದಲ್ಲಿ ನಿರ್ಮಿಸಲಾದ ಸೌರ ಶಾಖ ಪೆಟ್ಟಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸೌರ ಶಾಖ ಪೆಟ್ಟಿಗೆಯನ್ನು ಫಲಾನುಭವಿ ಕೃಷಿಕ ಭುವನೇಶ್ ಪಚ್ಚಿನಡ್ಕ ಅವರಿಗೆ ಹಸ್ತಾಂತರ ಮಾಡಿದರು.

ವ್ಯವಸ್ಥಾಪಕ ಹಾಗೂ ತೆಂಗು ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಜಾ ಬಂಟ್ವಾಳ್ ಸೌರ ಶಾಖ ಪೆಟ್ಟಿಗೆ ಮಹತ್ವವನ್ನು ವಿವರಿಸಿ ಇದರಲ್ಲಿ ತೆಂಗು, ಅಡಿಕೆ, ಕಾಳು ಮೆಣಸು, ಶುಂಠಿ, ಅರಿಶಿನ, ಹಣ್ಣು ಹಂಪಲು, ಬೀಜ ಸಂಗ್ರಹಕ್ಕಾಗಿ ತರಕಾರಿ, ಕೃಷಿ ಉತ್ಪನ್ನ ವಸ್ತುಗಳು, ಗಿಡ ಮೂಲಿಕೆ ಔಷಧೀಯ ಸಸ್ಯಗಳನ್ನು ಒಣಗಿಸುವ ವ್ಯವಸ್ಥೆಯನ್ನು ವೈಜ್ಞಾನಿಕ ಕ್ರಮದಲ್ಲಿ ಮಾಡುವುದು. ಇದರಿಂದ ಉತ್ಪನ್ನವು ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಸಮಯದ ಉಳಿತಾಯ, ಕನಿಷ್ಠ ಖರ್ಚು ವೆಚ್ಚ, ಕ್ರಿಮಿ ಕೀಟಗಳಿಂದ ರಕ್ಷಣೆಯು ಒದಗುವುದು ಎಂದರು.

ಶಾಖ ಪೆಟ್ಟಿಗೆಯು 50 ಅಡಿ ಉದ್ದ, 12.5 ಅಡಿ ಅಗಲ, 11 ಅಡಿ ಎತ್ತರ ಇರುವಂತೆ ನಿರ್ಮಾಣ ಮಾಡಲಾಗಿದೆ. ಒಳ ಭಾಗದಲ್ಲಿ 6 ಟ್ರಾಲಿ, 96 ಟ್ರೇಗಳು ಮತ್ತು 4 ಹೀಟರ್‌ಗಳು 4 ಟರ್ಬೊ ವೆಂಟೀಲೇಟರ್‌ಗಳು ಹಾಗೂ ಎಕ್ಸಾಸ್ಟ್ ಫ್ಯಾನ್‌ಗಳು ಅಳವಡಿಸವಾಗಿದೆ. ಒಳ ಭಾಗದ ಉಷ್ಣಾಂಶವನ್ನು ನಿಯಂತ್ರಿಸಲು ಸ್ವಯಂ ಚಾಲಿತ ವ್ಯವಸ್ಥೆ ಇರುವುದು. ವಿದ್ಯುತ್ ಸಂಪರ್ಕ ಕಡಿತವಾದಲ್ಲಿ  ಹೆಚ್ಚುವರಿ 1 ಕಿ.ವ್ಯಾಟ್ ಸೌರ ಶಕ್ತಿ ವಿದ್ಯುತ್ ಸಂಪರ್ಕವನ್ನು ಪ್ರತ್ಯೇಕವಾಗಿ ಅಳವಡಿಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಒಟ್ಟು ಮೂರು ಇಂತಹ ಘಟಕಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಸ್ಥಾಪಿಸಲಾಗಿದೆ ಎಂದರು.

ಶಾಖ ಪೆಟ್ಟಿಗೆ ನಿರ್ಮಾಣಕ್ಕೆ 6.31 ಲಕ್ಷ ರೂ. ವೆಚ್ಚ ಆಗುತ್ತಿದ್ದು 2.28 ಲಕ್ಷ ರೂ. ಸಹಾಯ ಧನ ತೋಟಗಾರಿಕಾ ಇಲಾಖೆಯಿಂದ ನೀಡಲಾಗುತ್ತದೆ. ಶಾಖ ಪೆಟ್ಟಿಗೆಯ ನಿರ್ಮಾಪಕ ಎಸ್.ಆರ್.ಬಿ. ಇಂಡಸ್ಟ್ರೀಸ್ ಮಾಲಕ ರವೀಂದ್ರ ಆರ್., ತೆಂಗು ಸೌಹಾರ್ದ ಸಹಕಾರಿಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಿತ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts