ಬಂಟ್ವಾಳದಲ್ಲಿ ಎಬಿವಿಪಿ ವತಿಯಿಂದ ಪತ್ರ ಚಳುವಳಿ ಅಭಿಯಾನ

ಜಾಹೀರಾತು

ಬಂಟ್ವಾಳ: ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾಕ್ಕೆ ಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸಮಿತಿ ಕರೆನೀಡಿದನ್ವಯ ಬಂಟ್ವಾಳದಲ್ಲಿ ಪತ್ರ ಚಳವಳಿ ಅಭಿಯಾನವನ್ನು ಕೈಗೊಳ್ಳಲಾಯಿತು.

ಎಬಿವಿಪಿ ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ ಅಂಚೆ ಕಛೇರಿ ಬಳಿ ಶನಿವಾರ ಪತ್ರ ಚಳವಳಿ ಅಭಿಯಾನ ನಡೆದಿದ್ದು, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಸೂಕ್ತವಾದ ಕಾನೂನು ರೂಪಿಸಲು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ.ಈ ಜಾಲಕ್ಕೆ ಪ್ರಮುಖವಾಗಿ ಕಾಳೆಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಹು ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕುವ ಸವಾಲು ರಾಜ್ಯ ಸರ್ಕಾರದ ಮುಂದಿದೆ. ಅದಕ್ಕಾಗಿ ಪ್ರಬಲ ಕಾನೂನನ್ನು ರೂಪಿಸಿದರೆ ಪರಿಹಾರ ಸಾಧ್ಯ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆ ವಿರುದ್ಧ ಸಮರ ಸಾರಬೇಕೆಂದು ಪತ್ರ ಚಳುವಳಿಯ ಮೂಲಕ ಆಗ್ರಹಿಸಲಾಯಿತು. ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು.ಈ ಸಂದರ್ಭ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ,ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅದ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ, ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ ,ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಎಬಿವಿಪಿ ವತಿಯಿಂದ ಪತ್ರ ಚಳುವಳಿ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*