ಬಂಟ್ವಾಳ

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ಸಾವು

ಜಾಹೀರಾತು

ಬಂಟ್ವಾಳ ಬಿ.ಸಿ.ರೋಡಿನಲ್ಲಿರುವ ನೇತ್ರಾವತಿ ನದಿ ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಹಾರಿರಬಹುದು ಎಂದು ಶಂಕಿಸಲಾಗಿದೆ. ಸಮೀಪದ ಪಾಣೆಮಂಗಳೂರು ಸೇತುವೆ ಬಳಿ ಇವರನ್ನು ಸ್ಥಳೀಯ ಈಜುಗಾರರು ಪತ್ತೆಹಚ್ಚಿ ದಡಕ್ಕೆ ತಂದ ವೇಳೆ ಮೃತಪಟ್ಟಿರುವುದು ಗೊತ್ತಾಗಿದೆ. ವಯಸ್ಸು 65ರಿಂದ 70 ವರ್ಷಗಳಿರಬಹುದು ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿ ನದಿಗೆ ಒಬ್ಬಂಟಿಯಾಗಿ ಸೇತುವೆ ಬಳಿ ಬಂದಿರುವ ಈ ವ್ಯಕ್ತಿ ನದಿಗೆ ಹಾರಿದರು. ಕೂಡಲೇ ಗೂಡಿನಬಳಿಯ ಈಜುಗಾರರು ಇವರನ್ನು ರಕ್ಷಿಸಲು ಯತ್ನಿಸಿದರೂ ಮೃತಪಟ್ಟಿದ್ದರು ಎನ್ನಲಾಗಿದೆ. ಶವವನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಬಂಟ್ವಾಳ ನಗರ ಠಾಣೆ ಅಪರಾಧ ವಿಭಾಗ ಎಸ್.ಐ.ಕಲೈಮಾರ್ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ