ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಹಿಂದಿ ಭಾಷಾ ಕಾರ್ಯಾಗಾರ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕು ಪ್ರೌಢಶಾಲೆ ಹಿಂದಿ ಭಾಷಾ ಶಿಕ್ಷಕರ ಸಂಘದ ವತಿಯಿಂದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಿಂದಿ ಕಾರ್ಯಗಾರ ಮತ್ತು ಹಿಂದಿ ದಿನಾಚರಣೆ ಆಚರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ಪ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರಾದ ಡಾ. ದೇವಕಿ ಪ್ರಸನ್ನ ಭಾಗವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ಕಚೇರಿಯ ಸಮನ್ವಯಾಧಿಕಾರಿಗಳಾದ ರಾಧಾಕೃಷ್ಣ ಭಟ್, ಬಂಟ್ವಾಳ ತಾಲೂಕು ಪ್ರೌಡಶಾಲೆ ಹಿಂದಿ ಭಾಷಾ ಶಿಕ್ಷಕರ ಸಂಘದಗೌರವಾಧ್ಯಕ್ಷ ರಮಾನಂದ, ಜಿಲ್ಲಾ ಸಂಘದ ಕಾರ್ಯದರ್ಶಿಗಳಾದ ಅನಿಲ್ ಕುಮಾರ್‌ ಇದ್ದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಿಂದಿ ಶಿಕ್ಷಕರು ಭಾಗವಹಿಸಿದ್ದರು. ಕಾರ್ಯದರ್ಶಿ ಶೇಖರಪ್ಪ ಸ್ವಾಗತಿಸಿದರು. ರಾಘವೇಂದ್ರ ರಾವ್ ವಂದಿಸಿದರು.ಶಂಕರ ವೆಂಕಪ್ಪ ಪಾವಸ್ಕರ್‌ ಕಾರ್ಯಕ್ರಮ ನಿರೂಪಿಸಿದರು.

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.