ಜಿಲ್ಲಾ ಸುದ್ದಿ

ಬೊಂಡಾಲ: ವಿದ್ಯಾರ್ಥಿನಿ ನಿಲಯ ಕಟ್ಟಡಕ್ಕೆ ಶಿಲಾನ್ಯಾಸ

ಜಾಹೀರಾತು

ಬಂಟ್ವಾಳ:  ದ.ಕ.ಜಿ.ಪಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ವತಿಯಿಂದ 2 ಕೋ.ರೂ.ವೆಚ್ಚದಲ್ಲಿ ತಾಲೂಕಿನ ಬೊಂಡಾಲದಲ್ಲಿ ನಿರ್ಮಾಣಗೊಳ್ಳಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಬಿ.ಸಿ.ರೋಡು(ಪಾಣೆಮಂಗಳೂರು)  ಇದರ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಶುಕ್ರವಾರ ನಡೆಯಿತು.

ಶಿಲಾನ್ಯಾಸ ನೆರವೇರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಹಿಂದುಳಿದ ವರ್ಗಗಳ ವಸತಿ‌ ನಿಲಯದಲ್ಲಿ ಕಲಿತ ಮಕ್ಕಳು ಇಂದು ಮುಖ್ಯವಾಹಿನಿಯಲ್ಲಿದ್ದಾರೆ. ಮಕ್ಕಳ ಕಲಿಕಾ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ಇಲಾಖೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುವುದು ಎಂದರು.

ಜಾಹೀರಾತು

ಕಾರ್ಯಕ್ರಮದಲ್ಲಿ ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯೆ ಕಮಲಾಕ್ಷಿ ಪೂಜಾರಿ, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

ಹಿಂದುಳಿಕ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಸ್ವಾಗತಿಸಿದರು. ಇಲಾಖೆಯ ತಾಲೂಕು ಕಲ್ಯಾಣ ಅಧಿಕಾರಿ ಬಿಂದಿಯಾ ನಾಯಕ್ ಪ್ರಸ್ತಾವನೆಗೈದರು. ವಾಮದಪದವು ವಿದ್ಯಾರ್ಥಿನಿ ನಿಲಯದ ಭವ್ಯ ವಂದಿಸಿದರು. ನಿಲಯದ ಅಧೀಕ್ಷಕಿ ಭವಾನಿ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ