ಬಂಟ್ವಾಳ

ಫಸಲ್ ಭೀಮಾ ಯೋಜನೆ ಪರಿಹಾರ ಮೊತ್ತ ಬಿಡುಗಡೆ: ಪ್ರಭಾಕರ ಪ್ರಭು ಮನವಿ

ಜಾಹೀರಾತು

ಬಂಟ್ವಾಳ: ಹವಮಾನ ಆಧಾರಿತ ಫಸಲು ಭೀಮಾ ಯೋಜನೆಯಲ್ಲಿ 2018-19 ನೇ ಸಾಲಿನ ಫಲಾನುಭವಿಗಳಿಗೆ ಪರಿಹಾರ ಮೊತ್ತವನ್ನ ಬಿಡುಗಡೆಗೊಳಿಸುವಂತೆ ಬಂಟ್ವಾಳ ತಾಪಂ ಸದಸ್ಯ, ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಪತ್ರದ ಮೂಲಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹವಮಾನ ಆಧಾರಿತ ಫಸಲು ಭೀಮಾ ಯೋಜನೆಯಲ್ಲಿ 2018-19 ನೇ ಸಾಲಿನಲ್ಲಿ ಪ್ರೀಮಿಯಂ ಹಣ ಪಾವತಿಸಿದ ಕೆಲ ಫಲಾನುಭವಿಗಳಿಗೆ ಪಹಣಿಪತ್ರಿಕೆಯಲ್ಲಿ ಬೆಲೆ ನಮೂದು ಪ್ರಕಾರ ಹಣ ಬಿಡುಗಡೆಯಾಗಿದೆ. ಪ್ರೀಮಿಯಂ ಹಣ ಪಾವತಿಸಿದ ಇನ್ನು ಕೆಲ ರೈತರ ಪಹಣಿಪತ್ರಿಕೆಯಲ್ಲಿ ಬೆಳೆ ನಮೂದು ಆಗಿಲ್ಲ ಎಂಬ ಕಾರಣಕ್ಕೆ ಪರಿಹಾರ ಮೊತ್ತ ಪಾವತಿಯಾಗಿಲ್ಲ ಎಂದು ಅವರು ಮನವಿಯಲ್ಲಿ ವಿವರಿಸಿದ್ದಾರೆ.

ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಪರಿಹಾರ ಮೊತ್ತವನ್ನು ಶೀಘ್ರವಾಗಿ ಬಿಡುಗಡೆಗೊಳಸುವಂತೆ ಪ್ರಭು ಮನವಿಯಲ್ಲಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.

ಬಿಪಿಎಲ್ ಪಡಿತರಕ್ಕೆ ಅರ್ಜಿ ಸ್ವೀಕರಿಸಿ: ಸರಕಾರದ ವಿವಿಧ ಯೋಜನೆಗೆ ಸಂಬಂಧಿಸಿ ಬಿಪಿಎಲ್ ಪಡಿತರ ಚೀಟಿ ಮಾನದಂಡವಾಗಿದ್ದು,ಆರ್ಹ ಫಲಾನುಭವಿಗಳು ಬಿಪಿಎಲ್ ಪಡಿತರ ಚೀಟಿ ಇಲ್ಲ ಎಂಬ ಕಾರಣಕ್ಕೆ ಸರಕಾರದ ಸವಲತ್ತು ಪಡೆಯುವಲ್ಲಿ ವಂಚಿತರಾಗುತ್ತಿರುವ ನಿಟ್ಟಿನಲ್ಲಿ  ಬಿಪಿಎಲ್ ಪಡಿತರ ಚೀಟಿಗೆ ಅರ್ಜಿಸ್ವೀಕಾರಕ್ಕೆ ಅವಕಾಶ ಕಲ್ಪಿಸುವಂತೆ  ತಾಪಂ ಸದಸ್ಯ ಪ್ರಭಾಕರ ಪ್ರಭು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಕೊರೋನಾದಿಂದಾಗಿ ಸ್ಥಗಿತಗೊಂಡಿದ್ದ ಆಧಾರ್ ಕಾಡ್೯ ಸಹಿತ ಎಲ್ಲ ಸಾರ್ವಜನಿಕ ಸೇವೆಗಳು ಆರಂಭವಾಗಿದ್ದು,ಬಿಪಿಎಲ್ ಪಡಿತರ ಚೀಟಿಗೂ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಿ ಪಡಿತರ ವಿತರಣೆಗೂ ಕ್ರಮಕೈಗೊಳ್ಳುವಂತೆ ಅವರು ಪತ್ರದಲ್ಲಿ ವಿನಂತಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts