ತೇಪೆ ಹಾಕುವ ಬದಲು ಸಂಪೂರ್ಣ ಸುಸ್ಥಿತಿಗೆ ತನ್ನಿ: ಚತುಷ್ಪಥ ಕಾಮಗಾರಿ ಪುನಾರಂಭಕ್ಕೆ 20 ದಿನಗಳ ಗಡುವು ನೀಡಿದ ಎಸ್.ಡಿ.ಪಿ.ಐ.

ಜಾಹೀರಾತು

ಸಂಚಾರಕ್ಕೆ ಆಯೋಗ್ಯವಾಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತೇಪೆ ಹಾಕುವುದನ್ನು ಬಿಟ್ಟು ಸಂಪೂರ್ಣ ಡಾಮಾರೀಕರಣಗೊಳಿಸಿ ಸುಸ್ಥಿತಿಗೆ ತರಬೇಕು ಇಲ್ಲವೆ ಚತುಷ್ಪಥ ಹೆದ್ದಾರಿ ಕಾಮಗಾರಿಯನ್ನು ಪುನರಾರಂಭಿಸುವಂತೆ  ಬಂಟ್ವಾಳ ಕ್ಷೇತ್ರ ಎಸ್ .ಡಿ .ಪಿ .ಐ 20 ದಿನಗಳ ಗಡುವು ನೀಡಿದೆ.

ಶನಿವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಡಿ ಪಿ ಐ ದ.ಕ.ಜಿಲ್ಲಾ ಪ್ರ.ಕಾರ್ಯದರ್ಶಿ ಸಾಹುಲ್ ಹಮೀದ್ ಕಳೆದ ತಿಂಗಳ 29 ರಂದು ಪಕ್ಷದ ವತಿಯಿಂದ  ನಡೆಸಲಾದ ಪ್ರತಿಭಟನೆಯ ಹಿನ್ನಲೆಯಲ್ಲಿ ಇದೀಗ ಹೆದ್ದಾರಿಯಲ್ಲಿರುವ ಬೃಹತ್ ಗಾತ್ರದ ಗುಂಡಿಗೆ ತೇಪೆ ಹಾಕುವ ಕಾರ್ಯ ಆರಂಭಗೊಂಡಿದೆ ಎಂದರು. ಈ ರೀತಿ ತೇಪೆ ಹಾಕುವುದರಿಂದ ಯಾವುದೇ ಪ್ರಯೋಜನವಿಲ್ಲ, ಮಳೆ ಸುರಿದರೆ ಮತ್ತೆ ಹೊಂಡಗಳು ಪ್ರತ್ಯಕ್ಷವಾಗುವ ಸಾಧ್ಯತೆ ಇದೆ.ಹಾಗಾಗಿ ಮಂಗಳೂರು-ಬೆಂಗಳೂರು ಹೆದ್ದಾರಿಯನ್ನು ಡಾಮಾರೀಕರಣಗೊಳಿಸಿ ಸುಸ್ಥಿತಿಗೆ ತರುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.

ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿ: ರಾ.ಹೆ.75ರ ಹಾಸನ-ಸಕಲೇಶ್ ಪುರ ಹಾಗೂ ಗುಂಡ್ಯ-ಬಿ.ಸಿ.ರೋಡ್ ನಡುವಣ ಚತುಷ್ಪಥ ರಸ್ತೆ ಕಾಮಗಾರಿ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದು,ಹೆದ್ದಾರಿಯಲ್ಲಿರುವ ಹೊಂಡ,ಗುಂಡಿಯಿಂದ ವಾಹನ ಸಂಚಾರವೇ ದುಸ್ತರವಾಗಿದೆ,ಈಗಾಗಲೇ ಪ್ರತಿನಿತ್ಯ ಅಪಘಾತಗಳು ಸಂಭವಿಸಿ ಸಾವು,ನೋವು ಸಂಭವಿಸುತ್ತಿದೆ.ಆದರೂ ಸಂಸದರು,ಶಾಸಕರುಗಳು,ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಚಕಾರವತ್ತದಿರುವುದು ಜನಸಾಮಾನ್ಯರ ಕುರಿತು ಇವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಬಂಟ್ವಾಳ ಕ್ಷೇತ್ರ ಎಸ್ ಡಿ ಪಿ ಐ ಅಧ್ಯಕ್ಷ ಯೂಸೂಫ್ ಆಲಡ್ಕ ಅವರು ಟೀಕಿಸಿದರು.        ಮುಂದಿನ 20 ದಿನದೊಳಗಾಗಿ ಹೆದ್ದಾರಿಯನ್ನು ಸಂಪೂರ್ಣ ಡಾಮಾರೀಕರಣಗೊಳಿಸಬೇಕು ಇಲ್ಲವೇ ಸ್ಥಗಿತಗೊಂಡಿರುವ ಹೆದ್ದಾರಿ ಕಾಮಗಾರಿಯನ್ನು ಪುನರಾರಂಭಿಸಬೇಕು ಇಲ್ಲದಿದ್ದಲ್ಲಿ  ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ವತಿಯಿಂದ ನೆಲ್ಯಾಡಿ,ಉಪ್ಪಿನಂಗಡಿ,ಮಾಣಿ,ಕಲ್ಲಡ್ಕ,ಮೆಲ್ಕಾರ್ ಮೊದಲಾದ ಪ್ರದೇಶಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಮೊನೀಶ್ ಆಲಿ,ಪ್ರ.ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತೇಪೆ ಹಾಕುವ ಬದಲು ಸಂಪೂರ್ಣ ಸುಸ್ಥಿತಿಗೆ ತನ್ನಿ: ಚತುಷ್ಪಥ ಕಾಮಗಾರಿ ಪುನಾರಂಭಕ್ಕೆ 20 ದಿನಗಳ ಗಡುವು ನೀಡಿದ ಎಸ್.ಡಿ.ಪಿ.ಐ."

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*