ರಿಕ್ಷಾದಲ್ಲಿದ್ದ ಮೌಲ್ಯಯುತ ದಾಖಲೆಗಳನ್ನು ವಾರೀಸುದಾರರ ಹುಡುಕಿ ಮರಳಿಸಿದ ಆಟೋ ಚಾಲಕ ಸತ್ತಾರ್

ಜಾಹೀರಾತು

ಬಂಟ್ವಾಳ : ಬಿ ಸಿ ರೋಡಿನ ಅಟೋ ರಿಕ್ಷಾ ಚಾಲಕ, ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಸತ್ತಾರ್ ಅವರು ಮಂಗಳವಾರ (ಅ 6) ತನ್ನ ರಿಕ್ಷಾದಲ್ಲಿ ಪ್ರಯಾಣಿಕರು ಬಿಟ್ಟು ಹೋದ ನಗದು ಹಾಗೂ ಇನ್ನಿತರ ಮೌಲ್ಯಯುತ ದಾಖಲೆಗಳಿದ್ದ ಪರ್ಸನ್ನು ವಾರೀಸುದಾರರನ್ನು ಹುಡುಕಿ ಮರಳಿಸಿದ್ದಾರೆ.

ಸತ್ತಾರ್ ಅವರು ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ತುಂಬೆಯಿಂದ ಬಿ ಸಿ ರೋಡು ಕಡೆ ತನ್ನ ಅಟೋ ರಿಕ್ಷಾದಲ್ಲಿ ಬರುತ್ತಿದ್ದ ವೇಳೆ ತುಂಬೆ ಜಂಕ್ಷನ್ನಿನಲ್ಲಿ ಇಬ್ಬರು ಅಸ್ಸಾಂ ಮೂಲದ ವ್ಯಕ್ತಿಗಳು ರಿಕ್ಷಾ ಏರಿದ್ದರು. ಇವರು ಬಿ ಸಿ ರೋಡಿನ ಭಗವತಿ ಬ್ಯಾಂಕ್ ಬಳಿ ಅಟೋ ರಿಕ್ಷಾದಿಂದ ಇಳಿದಿದ್ದರು. ಬಳಿಕ ಸತ್ತಾರ್ ಎಂದಿನಂತೆ ಬಿ ಸಿ ರೋಡಿನ ರಿಕ್ಷಾ ಪಾರ್ಕಿನಲ್ಲಿ ನಿಂತಿದ್ದಾಗ ರಿಕ್ಷಾದ ಹಿಂದಿನ ಆಸನದಲ್ಲಿ ಪರ್ಸ್ ಬಿದ್ದಿರುವುದು ಗಮನಕ್ಕೆ ಬಂದಿದೆ. ಪರ್ಸಿನಲ್ಲಿ 10 ಸಾವಿರಕ್ಕೂ ಮಿಕ್ಕಿದ ನಗದು ಹಣ, ಇತರ ಕೆಲ ಮೌಲ್ಯಯುತ ದಾಖಲೆಗಳು, ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ ಇತ್ಯಾದಿಗಳಿದ್ದವು. ಆದರೆ ಯಾವುದೇ ದಾಖಲೆಗಳಲ್ಲೂ ಸಂಬಂಧಪಟ್ಟವರ ಮೊಬೈಲ್ ಸಂಖ್ಯೆ ಕಂಡು ಬರಲಿಲ್ಲ. ಈ ಸಂಬಂಧ ರಿಕ್ಷಾದಲ್ಲಿ ಬಂದಿದ್ದ ವ್ಯಕ್ತಿಗಳನ್ನು ಸ್ಥಳೀಯವಾಗಿ ಸತ್ತಾರ್ ಹುಡುಕಾಡಿದರೂ ಎಲ್ಲಿಯೂ ಕಂಡು ಬಾರದ ಹಿನ್ನಲೆಯಲ್ಲಿ ನೇರವಾಗಿ ಬಿ ಸಿ ರೋಡಿನಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸಹದೇವ್ ಅವರ ಬಳಿ ವಿಷಯ ಪ್ರಸ್ತಾಪಿಸಿದರು. ಇಬ್ಬರು ಜೊತೆಯಾಗಿ ಪರ್ಸ್ ವಾರೀಸುದಾರರಿಗೆ ಹುಡುಕಾಡಿದಾಗ ಇಬ್ಬರು ವ್ಯಕ್ತಿಗಳು ಬಿ.ಸಿ. ರೋಡಿನ ಮಣಪ್ಪುರಂ ಫೈನಾನ್ಸ್‍ನಲ್ಲಿ ಕಂಡು ಬಂದಿದ್ದಾರೆ. ಈ ಸಂದರ್ಭ ರಿಕ್ಷಾದಲ್ಲಿ ದೊರೆತ ಪರ್ಸಿನ ಬಗ್ಗೆ ಗುರುತು ಪರಿಚಯ ವಿಚಾರಿಸಿ ಮನವರಿಕೆಯಾದ ಬಳಿಕ ಪರ್ಸನ್ನು ಪೊಲೀಸ್ ಸಿಬ್ಬಂದಿ ಸಹದೇವ್ ಅವರ ಸಮ್ಮುಖದಲ್ಲಿ ಸತ್ತಾರ್ ಅವರು ವಾರೀಸುದಾರರಾದ ಅಸ್ಸಾಂ ನಿವಾಸಿ ಆರಿಫ್ ಅವರಿಗೆ ಹಸ್ತಾಂತರಿಸಿದರು.

ಜಾಹೀರಾತು

ಸತ್ತಾರ್ ನೇತ್ರಾವತಿ ನದಿಯಲ್ಲಿ ಮುಳುಗುತ್ತಿದ್ದ ಹಲವರನ್ನು ರಕ್ಷಿಸಿ ನೇತ್ರಾವತಿ ವೀರ ಎಂಬ ಬಿರುದನ್ನೂ ಈ ಹಿಂದೆ ಪಡೆದುಕೊಂಡಿದ್ದು, ಹಲವು ಬಾರಿ ತನ್ನ ರಿಕ್ಷಾದಲ್ಲಿ ಬಿಟ್ಟುಹೋದ ಮೌಲ್ಯಯುತ ಸಾಮಾಗ್ರಿಗಳನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದರು. ಈ ಬಗ್ಗೆ ನಾಡಿನ ಹಲವು ಮಾಧ್ಯಮಗಳು ಸಚಿತ್ರ ವರದಿಗಳನ್ನೂ ಬಿತ್ತರಿಸಿತು. ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಎಚ್ ಎರ್ ಎಸ್) ಇದರ ಸಂಚಾಲಕರಾಗಿರುವ ಸತ್ತಾರ್ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ರಿಕ್ಷಾ ಯೂನಿಯನ್ ಸದಸ್ಯರೂ ಆಗಿರುತ್ತಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಿಕ್ಷಾದಲ್ಲಿದ್ದ ಮೌಲ್ಯಯುತ ದಾಖಲೆಗಳನ್ನು ವಾರೀಸುದಾರರ ಹುಡುಕಿ ಮರಳಿಸಿದ ಆಟೋ ಚಾಲಕ ಸತ್ತಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*