ಜಿಲ್ಲಾ ಸುದ್ದಿ

ಗುಂಡು ಹಾರಿಸಿ ಸುಳ್ಯದಲ್ಲಿ ಹತ್ಯೆ, ತನಿಖೆ ತೀವ್ರ, ಆರೋಪಿಗಳ ಪತ್ತೆಗೆ ವಿಶೇಷ ತಂಡ

ಜಾಹೀರಾತು

ಗುರುವಾರ ಬೆಳಗ್ಗೆ ಸುಳ್ಯ ಸಂಪಾಜೆ ನಿವಾಸಿಯಾದ ಸಂಪತ್ ಕುಮಾರ್ (40) ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ್ದು, ಈ ಕುರಿತು ಪೊಲೀಸ್ ತನಿಖೆ ತೀವ್ರಗೊಂಡಿದೆ.

ಸುಳ್ಯ ಕಸಬಾ ಗ್ರಾಮದ ಶಾಂತಿನಗರದಲ್ಲಿರುವ ಸಂಪತ್,‌ ಬಾಡಿಗೆ ಮನೆಯಿಂದ ಬೆಳಿಗ್ಗೆ ಸಮಯ ಸುಮಾರು 7.15ಗಂಟೆಗೆ ಹೊರಟು ಮನೆಯ ಪಕ್ಕದಲ್ಲಿದ್ದ ಕಾರಿನಲ್ಲಿ ಕುಳಿತಾಗ ಸುಮಾರು ನಾಲ್ಕು ಜನ  ದುಷ್ಕರ್ಮಿಗಳ ತಂಡ ಸಂಪತ್ ಕುಳಿತಿದ್ದ ಕಾರಿನ ಗಾಜನ್ನು ಒಡೆದು ತಲವಾರು, ಚೂರಿ ಮತ್ತು ಕೋವಿ ಯಿಂದ ದಾಳಿ ನಡೆಸಿದ್ದು, ಈ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಸಂಪತ್ ನನ್ನು ದುಷ್ಕರ್ಮಿಗಳ ತಂಡ ತಲವಾರು ಮತ್ತು ಚೂರಿಯಿಂದ ಕಡಿದು ಕೋವಿಯಿಂದ ಗುಂಡು ಹಾರಿಸಿದ್ದು, ಈ ವೇಳೆ ತಡೆಯಲು ಬಂದ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಸ್ಥಳೀಯರು ಘಟನಾ ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ದುಷ್ಕರ್ಮಿಗಳು ಪರಾರಿಯಾಗಿದ್ದು, ತೀವ್ರ ಗಾಯಗೊಂಡಿದ್ದ ಸಂಪತ್ ಕುಮಾರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2020 ಕಲಂ 448,324,302 R/W 34 ಐಪಿಸಿ ಮತ್ತು ಕಲಂ  3 & 25 ಅರ್ಮ್ಸ್ ಆಕ್ಟ್ ನಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ, ಪತ್ತೆಕಾರ್ಯ ನಡೆಸಲಾಗುತ್ತಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ