ಬಂಟ್ವಾಳ ಕ್ಷೇತ್ರದ 4 ಗ್ರಾಪಂಗಳ 4815 ಮನೆಗಳಿಗೆ ನಳ್ಳಿ ನೀರು ಸಂಪರ್ಕ ಯೋಜನೆ ಅನುಮೋದನೆ

ಸಚಿವ ಈಶ್ವರಪ್ಪ ನೇತೃತ್ವದ ಸಭೆಯಲ್ಲಿ ಕಾಮಗಾರಿ ಆರಂಭಕ್ಕೆ ಸೂಚನೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ 4 ಗ್ರಾಪಂಗಳ 51 ಜನವಸತಿಗಳ 4815 ಮನೆಗಳಿಗೆ ಕಾರ್ಯಾತ್ಮಕ ನಳ್ಳಿನೀರು ಸಂಪರ್ಕ ಒದಗಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗಿದ್ದು ಇದಕ್ಕೆ ಸಚಿವ ಈಶ್ವರಪ್ಪ ಅನುಮೋದನೆ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮೂಡಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಭಾಗವಹಿಸಿದ್ದು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳಾದ ಅಮ್ಮುಂಜೆ ಗ್ರಾಮದ 1215 ಮನೆಗಳಿಗೆ, ಬಡಗಬೆಳ್ಳೂರು ಗ್ರಾಮದ 823 ಮನೆಗಳಿಗೆ, ತೆಂಕಬೆಳ್ಳೂರು ಗ್ರಾಮದ 315 ಮನೆಗಳಿಗೆ,ಕಳ್ಳಿಗೆ ಗ್ರಾಮದ 1273 ಮನೆಗಳಿಗೆ,ಕರಿಯಂಗಳ ಗ್ರಾಮದ 890 ಮನೆಗಳಿಗೆ ಒಟ್ಟು 4 ಗ್ರಾ.ಪಂನ 51 ಜನ ವಸತಿಗಳ 4815 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಒದಗಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗಿದ್ದು ಸಚಿವರು ಅನುಮೋದನೆ ನೀಡಿ ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರು ಹಾಗೂ ಮೂಡಬಿದಿರೆ ತಾಲೂಕಿನ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಚಿವರು ಅನುಮೋದನೆ ನೀಡಿದರು. ಸಂದರ್ಭ ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಇಲಾಖೆಯ ಸರಕಾರದ ಪ್ರ.ಕಾರ್ಯದರ್ಶಿ ಎಲ್.ಕೆ ಅತಿಕ್, ಗ್ರಾಮೀಣ ಕುಡಿಯುವ ನೀರಿನ ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಇಂಜಿನೀಯರ್ ಹೊಳೆಯಾಜಿ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಕ್ಷೇತ್ರದ 4 ಗ್ರಾಪಂಗಳ 4815 ಮನೆಗಳಿಗೆ ನಳ್ಳಿ ನೀರು ಸಂಪರ್ಕ ಯೋಜನೆ ಅನುಮೋದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*