ಪಂಚಾಯತ್ ರಾಜ್ ವ್ಯವಸ್ಥೆಯ ಬೆಳವಣಿಗೆಗಾಗಿ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯ: ಯು.ಟಿ.ಖಾದರ್

ಜಾಹೀರಾತು

ಮಹಾತ್ಮಾ ಗಾಂಧೀಜಿಯವರ ಕನಸಿನ ಭಾರತದ ತಳಹದಿಯಾಗಿರುವ ಪಂಚಾಯತ್ ರಾಜ್ ವ್ಯವಸ್ಥೆಗಾಗಿ ಕಾಂಗ್ರೆಸ್ ಪಕ್ಷವು ನಿರಂತರವಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಸಮಾಜದ ಎಲ್ಲಾ ವಿಭಾಗದ ಜನಸಾಮಾನ್ಯರಿಗೆ ಸಾಮಾಜಿಕ ನ್ಯಾಯ ಹಾಗೂ ಯೋಜನೆಗಳನ್ನು ತಲುಪಿಸುವಲ್ಲಿ ವಿಶೇಷ ಪಾತ್ರವಹಿಸಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಮುಂದೆ ನಡೆಯಲಿರುವ ಚಿನಾವಣೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಎಲ್ಲಾ ಜಾತಿ-ವರ್ಗದವರಿಗೆ ಮೀಸಲಾತಿಯ ಮೂಲಕ ನ್ಯಾಯ ಒದಗಿಸಿದ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಚುನಾಯಿಸುವ ಮೂಲಕ ಗ್ರಾಮಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಅವಕಾಶ ಮಾಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಡಿಪು ಬ್ಲಾಕ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ವಹಿಸಿದ್ದರು. ಬಳಿಕ ನಡೆದ ವಿಶೇಷ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ನದ್ ಬಡಗನ್ನೂರು, ಪುತ್ತೂರಿನ ನ್ಯಾಯವಾದಿ ದುರ್ಗಾಪ್ರಸಾದ್ ಪಂಚಾಯತ್ ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಪಕ್ಷದ ಕೊಡುಗೆಯ ಬಗ್ಗೆ ವಿಷಯ ಮಂಡಿಸಿದರು.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮುಡಿಪು ಬ್ಲಾಕ್ ಸಂಯೋಜಕ ಹೈದರ್ ಕೈರಂಗಳ ಪ್ರಸ್ತಾವನೆಯ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ , ಉಮ್ಮರ್ ಪಜೀರ್, ಫಾರೂಕ್ ಫರಂಗಿಪೇಟೆ, ಪ್ರಕಾಶ್ ಶೆಟ್ಟಿ ತುಂಬೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ನಾಸಿರ್ ನಡುಪದವು, ಪದ್ಮನಾಭ ನರಿಂಗಾನ, ಇಮ್ತಿಯಾಝ್ ತುಂಬೆ, ಅರುಣ್ ಡಿಸೋಜ, ಸಮೀರ್ ಪಜೀರ್, ಸತ್ತಾರ್ ಕೈರಂಗಳ, ಜಗದೀಶ್ ಪಲಾಯಿ, ಜಗದೀಶ್ ಗಟ್ಟಿ ತುಂಬೆ, ಸೀತಾರಾಮ ಶೆಟ್ಟಿ, ಹನೀಫ್ ಚಂದಹಿತ್ಲು ಭಾಗವಸಿದ್ದರು. ಬಶೀರ್ ಮುಡಿಪು ಕಾರ್ಯಕ್ರಮ ನಿರೂಪಿಸಿದರು ರಝಾಕ್ ಕುಕ್ಕಾಜೆ ದನ್ಯವಾದ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಂಚಾಯತ್ ರಾಜ್ ವ್ಯವಸ್ಥೆಯ ಬೆಳವಣಿಗೆಗಾಗಿ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯ: ಯು.ಟಿ.ಖಾದರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*