ಬಂಟ್ವಾಳ

ಎರಡು ಸಾವಿರ ಮಂದಿಗೆ ಉದ್ಯೋಗ ನೈಪುಣ್ಯ ತರಬೇತಿ: ಡಾ. ಭಟ್

ಬಂಟ್ವಾಳ:  ಪ್ರಧಾನಿ ನರೇಂದ್ರಮೋದಿಯವರ ಆಶಯದ ಆತ್ಮನಿರ್ಭರ ಕಾರ್ಯಕ್ರಮದ ಅಂಗವಾಗಿ ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ 7 ಕಡೆಗಳಲ್ಲಿ ನಡೆದ ಉದ್ಯೋಗ ನೈಪುಣ್ಯ ಶಿಕ್ಷಣ ಕಾರ್ಯಕ್ರಮದಲ್ಲಿ 2 ಸಾವಿರ ದಷ್ಟು ಶಿಕ್ಷಾರ್ಥಿಗಳು ತರಬೇತಿ ಪಡೆದಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ.

ಜಾಹೀರಾತು

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ  ವಿದ್ಯಾವರ್ಧಕ ಸಂಘ ಪತ್ತೂರು , ಸಹಕಾರ ಭಾರತಿ ದ.ಕ. ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು ಇವುಗಳ ಸಹಯೋಗದೊಂದಿಗೆ  ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ   ಒಂದು ವಾರದ ಕಾಲ ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಡಾ.ಭಟ್ ಅವರು ಶಿಕ್ಷಾರ್ಥಿಗಳು ಕಲಿತ ಶಿಕ್ಷಣವನ್ನು ತಮ್ಮ ವೃತ್ತಿ ಜೀವನದಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾತನಾಡಿ, ಕೊರೋನ ಮಹಾಮಾರಿಯ ಈ ಸಂದರ್ಭದಲ್ಲಿ ಇಂತಹ ತರಬೇತಿ ಶಿಬಿರ ಸಕಾಲಿಕ ಮತ್ತು ಅಭಿನಂದರ್ಹಾವಾಗಿದೆ ಎಂದರು.

ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಚಾಲಕ ಮಹಾದೇವಶಾಸ್ತ್ರೀ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮಣ್ ಕಾಂತಪ್ಪ ಶೆಟ್ಟಿ, ಗ್ರಾಮ ವಿಕಾಸ ಮಂಗಳೂರು ವಿಭಾಗದ ಪ್ರಮುಖ ವೆಂಕಟರಮಣ ಹೊಳ್ಳ ಬಿ.ಸಿ.ರೋಡ್,ಉದ್ಯಮಿ ಮಂಜುನಾಥ ಪೈ ಬಿ.ಸಿ.ರೋಡು ವೇದಿಕೆಯಲ್ಲಿದ್ದರು.

ಸುಮಾರು 164 ಶಿಕ್ಷಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದು,ಇವರೆಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ವಿನಾಯಕ ಬಿ.ಸಿ.ರೋಡ್ ಸ್ವಾಗತಿಸಿದರು.ಪ್ರಭಾಕರ ಪಿ.ಎಂ.ವಯಕ್ತಿಕ ಗೀತೆ ಹಾಡಿದರು.ನಾಗೇಶ್ ಟೈಲರ್ ವಂದಿಸಿದರು.ಶಿಬಿರದ ಸಂಚಾಲಕ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು.

ಅಲ್ಯೂಮಿನಿಯಮ್ ಫೆಬ್ರಿಕೇಶನ್ ಮತ್ತು ವೆಲ್ಡಿಂಗ್, ಇಲೆಕ್ಟಿçಕಲ್ ಮತ್ತು ಪ್ಲಂಬಿಂಗ್, ಕೃಷಿ ಯಂತ್ರೋಪಕರಣ ದುರಸ್ತಿ, ಇಲೆಕ್ಟ್ರಿಕ್ ಉಪಕರಣಗಳ ದುರಸ್ತಿ, ಹೈನುಗಾರಿಕೆ, ಗ್ರಾಹಕ ಮಾಹಿತಿ ಕೇಂದ್ರ, ಫ್ಯಾಶನ್ ಡಿಸೈನ್ಸ್, ಜೇನು ಕೃಷಿ ಮತ್ತು ಮೀನು ಸಾಕಾಣಿಕೆ, ಮೊಬೈಲ್ ರಿಪೇರಿ, ಸಿಸಿ ಟಿವಿ ಅಳವಡಿಕೆಯ ಬಗ್ಗೆ ತರಬೇತಿ ನೀಡಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

18 hours ago