ಬಂಟ್ವಾಳ

ಉಳ್ಳಾಲ ತಾಲೂಕು ರಚನಾ ಕಾರ್ಯ ಪ್ರಗತಿಯಲ್ಲಿ: ಯು.ಟಿ.ಖಾದರ್

ಉಳ್ಳಾಲ ತಾಲೂಕು ರಚನೆಯ ಕಾರ್ಯ ಪ್ರಗತಿಯಲ್ಲಿದ್ದು, ಮಂಗಳೂರು ಕ್ಷೇತ್ರಕ್ಕೆ ಬರುವ ಬಂಟ್ವಾಳದ ಕೆಲ ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲವು ಕೂಡ ಉಳ್ಳಾಲ ತಾಲೂಕಿಗೆ ಸೇರ್ಪಡೆಗೊಳ್ಳಲಿವೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತುಂಬೆ-ಸಜೀಪ ಮಧ್ಯೆ ಸೇತುವೆಯ ಪ್ರಸ್ತಾವನೆ ಸರಕಾರದ ಮುಂದಿದ್ದು, ಅದು ನಿರ್ಮಾಣಗೊಂಡಲ್ಲಿ ಉಳಿದ ಗ್ರಾಮಗಳನ್ನೂ ಉಳ್ಳಾಲಕ್ಕೆ ಸೇರಿಸಲು ಸಹಕಾರಿಯಾಗಲಿದೆ. ಜತೆಗೆ 220 ಕೋ.ರೂ.ಗಳಲ್ಲಿ ಹರೇಕಳ- ಅಡ್ಯಾರ್ ಸೇತುವೆ ಹಾಗೂ 258 ಕೋ.ರೂ.ಗಳ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.

ಈ ಸಂದರ್ಭ ಯು.ಟಿ.ಖಾದರ್ ಅವರ ಹುಟ್ಟುಹಬ್ಬಕ್ಕೆ ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್, ಇರಾ ಗ್ರಾಪಂ ಮಾಜಿ ಅಧ್ಯಕ್ಷ ಅಬ್ದುರ್ ರಝಾಕ್ ಕುಕ್ಕಾಜೆ, ಪುದು ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪ್ರಮುಖರಾದ ಮುರಳೀಧರ ಶೆಟ್ಟಿ ನರಿಂಗಾನ, ಇಕ್ಬಾಲ್, ಶಮೀರ್ ಫಜೀರ್, ಮಜೀದ್ ಫರಂಗಿಪೇಟೆ ವೃಂದಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ