ಬಂಟ್ವಾಳ

ಅಣ್ಣಳಿಕೆ ಯಕ್ಷಾಭಿಮಾನಿಗಳಿಂದ ತಾಳಮದ್ದಲೆ, ಸನ್ಮಾನ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕು ಕೊಯಿಲ, ಅಣ್ಣಳಿಕೆ ಯಕ್ಷಾಭಿಮಾನಿಗಳು ವತಿಯಿಂದ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಬಂಟ್ವಾಳ ಸಹಕಾರದಲ್ಲಿ 12ನೇ ವರ್ಷದ ತಾಳಮದ್ದಳೆ ಕೂಟ  ಹಾಗೂ ಸನ್ಮಾನ ಕಾರ್ಯಕ್ರಮ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ಜರಗಿತು.

ಈ ಸಂದರ್ಭ ಹಿರಿಯ ಯಕ್ಷಗಾನ ಅರ್ಥಧಾರಿ, ಪ್ರಗತಿಪರ ಕೃಷಿಕ ನೋಣಯ್ಯ ಶೆಟ್ಟಿಗಾರ್ ಹಾಗೂ ಪತ್ನಿ ಸುಲೋಚನಾ ಅವರನ್ನು   ಸನ್ಮಾನಿಸಲಾಯಿತು. ಕೊಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮರಾಜ್ ಬಲ್ಲಾಳ್, ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ ಶಂಭು ಶರ್ಮ ವಿಟ್ಲ , ರೋಟರಿಕ್ಲಬ್ ಲೊರೆಟ್ಟೊ ಹಿಲ್ಸ್ ಬಂಟ್ವಾಳ ಅಧ್ಯಕ್ಷ ಆಂಟನಿ ಸಿಕ್ವೆರಾ, ಪ್ರ. ಕಾರ್ಯದರ್ಶಿ ಪ್ರೀತಂ ರೊಡ್ರಿಗಸ್, ನಿಕಟಪೂರ್ವ ಕಾರ್ಯದರ್ಶಿ  ರಾಮಚಂದ್ರ ಶೆಟ್ಟಿಗಾರ್, ಯಕ್ಷಗಾನ  ಸಂಘಟಕ ಹರಿಪ್ರಸಾದ್ ರಾವ್ ಸಿದ್ದೈಕೋಡಿ, ನ್ಯಾಯವಾದಿ ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಸಮಿತಿ ಸದಸ್ಯರಾದ ಸುರೇಶ್ ಅಣ್ಣಳಿಕೆ, ಚಂದ್ರಹಾಸ ಅಣ್ಣಳಿಕೆ, ರಾಜಕುಮಾರ್ ಶೆಟ್ಟಿಗಾರ್, ಅಂಕಿತಾ, ಆಕಾಶ್,ಸುಮಿತ್ರಾ ಆರ್.ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಕಚ ದೇವಯಾನಿ ತಾಳಮದ್ದಳೆ ನಡೆಯಿತು. ಪತ್ರಕರ್ತ, ಕಲಾವಿದ ರತ್ನದೇವ ಪುಂಜಾಲಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.