ಬಂಟ್ವಾಳ: ಮಂಗಳವಾರದಿಂದೀಚೆಗೆ ಸುರಿದ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ತಡೆಗೋಡೆ ಕುಸಿದು ಬಿದ್ದಿದೆ.
ಈಶ್ವರ (ಶ್ರೀ ಕಾರಿಂಜೇಶ್ವರ) ದೇವಸ್ಥಾನದ ಎಡ ಪಾರ್ಶ್ವ ದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬಂದಿ ಗಮನಕ್ಕೆ ಬಂದಿದೆ.ಇಲ್ಲಿ ಅಂಗಣದಲ್ಲಿ ವಾನರ ಸಮೂಹಕ್ಕೆ ನೈವೇದ್ಯ ನೀಡುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತು ಹೋಗಿದೆ. ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿರುವ ಕಾರಿಂಜ ದೇವಸ್ಥಾನಕ್ಕೆ ದೂರದೂರದಿಂದ ಭಕ್ತರು ಬರುತ್ತಾರೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ನಿರ್ಬಂಧ ಇರುವ ಕಾರಣ ನಿಯಮ ಪಾಲನೆಗಳೊಂದಿಗೆ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ . ಪ್ರಸ್ತುತ ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…