ಕಲ್ಲಡ್ಕ

ಕಲ್ಲಡ್ಕ ಸಮೀಪ ಅಪಘಾತ: ಗಾಯಾಳು ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದಲ್ಲಿ ನಡೆದ ಆಟೊ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.

ಜಾಹೀರಾತು

ಮೆಲ್ಕಾರ್ ನಿವಾಸಿ ತಾರಾನಾಥ (35) ಮೃತಪಟ್ಟವರು. ಬುಧವಾರ ಸಂಜೆ ವೇಳೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕ ಪೇಟೆಗೆ ತಾರಾನಾಥ ಅವರು ದ್ವಿಚಕ್ರವಾಹನದಲ್ಲಿ ಬರುವ ವೇಳೆ ಅಪಘಾತ ನಡೆದಿತ್ತು.

ಘಟನೆಯಲ್ಲಿ ತಾರಾನಾಥ ಅವರ ಹೊಟ್ಟೆಯ ಭಾಗಕ್ಕೆ ಗಾಯವಾಗಿದ್ದು ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.