ಬಂಟ್ವಾಳ

ಕೊರೋನ – ಡ್ರಗ್ಸ್ ಹಾವಳಿ ವಿರುದ್ಧ ಜನ ಜಾಗೃತಿ – ಬೀದಿನಾಟಕ

ಜಾಹೀರಾತು

ಬಂಟ್ವಾಳ: ಶ್ರೀ ಕ್ಷೇತ್ರ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ ಟ್ರಸ್ಟ್(ರಿ) ಬಂಟ್ವಾಳ, ಪಾಣೆಮಂಗಳೂರು ವಲಯ ಮತ್ತು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಬಂಟ್ವಾಳ ಆಶ್ರಯದಲ್ಲಿ ಕೊರೋನ ವೈರಸ್ ಮತ್ತು ಡ್ರಗ್ಸ್ ಹಾವಳಿ ಬಗ್ಗೆ ನಾಗರಿಕರಲ್ಲಿ ಅರಿವು, ಜಾಗೃತಿ ಮೂಡಿಸುವ ಸಲುವಾಗಿ ದಾವಣಗೆರೆ ತಂಡದವರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು.

ಧ್ಯಕ್ಷತೆಯನ್ನು ಸಜೀಪ ಮೂಡ ಗ್ರಾ.ಪ. ಅಧ್ಯಕ್ಷ ವಿಶ್ವನಾಥ ಬೆಲ್ಚಡ ವಹಿಸಿದ್ದರು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ಎ. ಸಿ. ಭಂಡಾರಿ ಉದ್ಘಾಟಿಸಿ ಕೊರೋನ ವಿಪತ್ತು ಮತ್ತು ಮಾದಕ ವ್ಯಸನ ಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೀದಿನಾಟಕ ಗಳಂತಹ ಕಾರ್ಯಕ್ರಮಗಳನ್ನು ಯೋಜನೆಯ ಮೂಲಕ ಹಮ್ಮಿ ಕೊಂಡಿರುವುದು ಡಾ. ಹೆಗ್ಗಡೆ ಅವರ ಸಾಮಾಜಿಕ ಕಳಕಳಿಯ ಪ್ರತೀಕ ಎಂದರು. ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಬಂಟ್ವಾಳ ನಗರ ಠಾಣಾ ಸಿಬ್ಬಂದಿ ನಾಗರಾಜ್ ಮಂಗಳೂರು, ಬಂಟ್ವಾಳ ವಲಯ ಅಧ್ಯಕ್ಷ ವಸಂತ, ಸಜೀಪ ಮೂಡ ಒಕ್ಕೂಟ ಅಧ್ಯಕ್ಷ ಚಂದ್ರಹಾಸ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಪ್ನಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಅಮಿತಾ ನಿರೂಪಿಸಿ ವಂದಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ