ಬಂಟ್ವಾಳ

ನಂದಾವರ ಕ್ಷೇತ್ರದಲ್ಲಿ ಎ.ಸಿ.ಭಂಡಾರಿ ಅವರಿಗೆ ಪೌರಸನ್ಮಾನ

ಜಾಹೀರಾತು

www.bantwalnews.com Editor: Harish Mambady

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ಗುರುವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 35 ವರ್ಷಗಳ ಕಾಲ ಆಡಳಿತ ಮೊಕ್ತೇಸರ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಎ.ಸಿ.ಭಂಡಾರಿ ಅವರಿಗೆ ಪೌರಸನ್ಮಾನ ಕಾರ್ಯಕ್ರಮವನ್ನು ವಿಘ್ನೇಶ್ವರ ಸೇವಾ ಸಮಿತಿ ಮತ್ತು ನೇತ್ರಾವತಿ ಯುವಕ ಮಂಡಲ ವತಿಯಿಂದ ಏರ್ಪಡಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ನಂದಾವರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ ಭಟ್ ಮಾತನಾಡಿ ಎ.ಸಿ.ಭಂಡಾರಿ ಅವರು ಕ್ಷೇತ್ರದ ಅಭಿವೃದ್ಧಿಯ ಕುರಿತು ಸೇವಾ ಸಮಿತಿಯ ಇತರ ಸದಸ್ಯರೊಡಗೂಡಿ ನಡೆಸಿದ ಕೆಲಸಗಳನ್ನು ಸ್ಮರಿಸಿದರು.

ಸನ್ಮಾನಕ್ಕೆ ಉತ್ತರಿಸಿದ ಎ.ಸಿ.ಭಂಡಾರಿ, 1980ನೇ ಇಸವಿಯಿಂದ ಈ ಕ್ಷೇತ್ರದ ಒಡನಾಟವನ್ನು ಹೊಂದಿದ್ದು, ದೇವರ ಪ್ರೇರಣೆಯಿಂದ ಸೇವೆ ನಡೆಸುವ ಅವಕಾಶ ಒದಗಿಬಂದಿದೆ. ಮುಂದೆಯೂ  ಕ್ಷೇತ್ರದ ಏಳಿಗೆಗೆ ಬೇಕಾದ ಸಹಕಾರವನ್ನು ನೀಡುತ್ತೇನೆ. ದೇವಸ್ಥಾನದಿಂದ ಪಾಣೆಮಂಗಳೂರು ಕಡೆಗೆ ನೇತ್ರಾವತಿ ಬದಿಯಲ್ಲಿಯೇ ರಸ್ತೆಯೊಂದರ ನಿರ್ಮಾಣ ಶೀಘ್ರವಾದರೆ, ಪ್ರವಾಸೋದ್ಯಮ ಹಿನ್ನೆಲೆಯಲ್ಲೂ ಕ್ಷೇತ್ರ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.

ವೇದಮೂರ್ತಿ ಶಿವರಾಮ ಮಯ್ಯ ತನ್ನಚ್ಚಿಲ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕೆಲಿಂಜ ಉಳ್ಳಾಲ್ತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಪಿ.ಶಂಕರನಾರಾಯಣ ಭಟ್, ಉದ್ಯಮಿ ವಿವೇಕ್ ಬಾಳಿಗಾ, ವಿಘ್ನೇಶ್ವರ ಸೇವಾ ಸಮಿತಿ ಅಧ್ಯಕ್ಷ ಅಶೋಕ ಗಟ್ಟಿ ನಂದಾವರ, ನೇತ್ರಾವತಿ ಯುವಕ ಮಂಡಲ ಅಧ್ಯಕ್ಷ ಚಂದ್ರಶೇಖರ ಕುಲಾಲ್ ಉಪಸ್ಥಿತರಿದ್ದರು

ಬಿ.ಕೆ.ರಾಜ ನಂದಾವರ ಸನ್ಮಾನಿತರ ಪರಿಚಯ ಮಾಡಿದರು. ಕಾರ್ತಿಕ್ ಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಕಾಪಿಕಾಡ್ ಸ್ವಾಗತಿಸಿದರು. ಶ್ರೀನಿವಾಸ ಗಟ್ಟಿ ನಂದಾವರ ವಂದಿಸಿದರು. ಕಲಾವಿದ ರಾಘವೇಂದ್ರ ಕಾರಂತ ಕಾರ್ಯಕ್ರಮ ನಿರ್ವಹಿಸಿದರು.

ಇದೇ ವೇಳೆ ಕಳೆದ ಸಾಲಿನ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ಗೌರವಿಸಲಾಯಿತು. ಶ್ರೀ ಕ್ಷೇತ್ರದ ವಿನಾಯಕ, ಶಂಕರನಾರಾಯಣ ಮತ್ತು ದುರ್ಗಾಂಬಾ ದೇವರಿಗೆ ವಿಶೇಷ ರಂಗಪೂಜೆಯನ್ನು ನೆರವೇರಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts