ಬಂಟ್ವಾಳ

ಬೀದಿ ನಾಟಕ ಮೂಲಕ ಸಾಮಾಜಿಕ ಜಾಗೃತಿಯನ್ನು ಮೂಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಜಾಹೀರಾತು

ಬಂಟ್ವಾಳ: ಶ್ರೀ ಕ್ಷೇ.ಧ.ಗ್ರಾ.ಯೊ.ಬಿ.ಸಿ ಟ್ರಸ್ಟ್(ರಿ); ಬಂಟ್ವಾಳ, ಸಿದ್ಧಕಟ್ಟೆ ವಲಯ ಮತ್ತು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ಅಂಗವಾಗಿ ಸಿದ್ಧಕಟ್ಟೆ ಯಲ್ಲಿ  ಶೃತಿ ಸಾಂಸ್ಕೃತಿಕ ಕಲಾ ತಂಡ, ದಾವಣಗೆರೆ  ಇದರ ಕಲಾವಿದರಿಂದ ಗಾಯನ, ಕಿರುಪ್ರಹಸನ ಬೀದಿ ನಾಟಕ ಪ್ರದರ್ಶನ ಯೇರ್ಪಡಿಸಿ ಸಾಮಾಜಿಕ ಜವಾಬ್ದಾರಿ, ಪರಿಸರ ಸ್ವಚ್ಛತೆ, ಆರೋಗ್ಯ ರಕ್ಷಣೆ, ವ್ಯಸನ ಮುಕ್ತ ಸಮಾಜ ನಿರ್ಮಾಣ ದ ಜಾಗೃತಿ ಮೂಡಿಸಲಾಯಿತು.

ತಾಲೂಕು ಯೋಜನಾಧಿಕಾರಿ ಜಯಾನಂದ. ಪಿ. ಉದ್ಘಾಟಿಸಿ ನಮ್ಮ ಜನರು ಪ್ರಜ್ಞಾವಂತರು, ಇನ್ನಷ್ಟು ಜಾಗೃತ ರಾಗಲು ಇಂತಹ ಕಾರ್ಯಕ್ರಮಗಳು ಪ್ರೇರಣೆ ನೀಡುತ್ತವೆ. ನಾವು ಇದರ ಸಂದೇಶವನ್ನು ನಿತ್ಯ ಅಳವಡಿಸಿಕೊಂಡಾಗ ಕಲಾವಿದರ ಶ್ರಮ ಸಾರ್ಥಕ ವಾಗುತ್ತದೆ ಎಂದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಕರ್ಪೆ, ಅಧ್ಯಕ್ಷತೆ ವಹಿಸಿದ್ದರು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ವಲಯ ಅಧ್ಯಕ್ಷ ಸದಾನಂದ ಶೀತಲ್, ಜನಜಾಗೃತಿ ವೇದಿಕೆ ನಿಕಟಪೂರ್ವ ವಲಯಾಧ್ಯಕ್ಷ, ತಾಲೂಕು ಸಮಿತಿ ಸದಸ್ಯ ಜಗದೀಶ್ ಕೊಯ್ಲ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್ ಕಲಾವಿದರನ್ನು ಅಭಿನಂದಿಸಿದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಪ್ನಾ, ಸಿದ್ಧಕಟ್ಟೆ ವಲಯ ಒಕ್ಕೂಟಗಳ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಉಪಸ್ಥಿತರಿದ್ದರು.ಸೇವಾ ಪ್ರತಿನಿಧಿ ರಾಘವೇಂದ್ರ ಭಟ್ ಸ್ವಾಗತಿಸಿ ವಲಯ ಮೇಲ್ವಿಚಾರಕಿ ಹರಿಣಾಕ್ಷಿ ರೈ ನಿರೂಪಿಸಿ ವಂದಿಸಿದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.