ಸರ್ಕಾರಿ ಕಚೇರಿ

ಪುನರ್ವಸತಿ ಕಾರ್ಯಕರ್ತರ ನೇಮಕ: ವಿಶೇಷಚೇತನರಿಂದ ಅರ್ಜಿ ಆಹ್ವಾನ

https://www.bantwalnews.com

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ 18ರಿಂದ 45 ವರ್ಷದೊಳಗಿನ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ, ಅನುತ್ತೀರ್ಣರಾದ ವಿಕಲಚೇತನ (ಅಂಗವಿಕಲ)ರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದ್ದು, ಮಾಸಿಕ 6 ಸಾವಿರ ರೂ ಗೌರವಧನವನ್ನು ನೀಡಲಾಗುತ್ತಿದೆ. ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜೀಪನಡು, ಸಜೀಪಪಡು, ಮೇರಮಜಲು, ಪಂಜಿಕಲ್ಲು, ಬಡಗಬೆಳ್ಳೂರು ಗ್ರಾಪಂಗಳಲ್ಲಿ ಹುದ್ದೆ ಖಾಲಿ ಇದ್ದು, ಆಸಕ್ತ ವಿಕಲಚೇತನರು ನವೆಂಬರ್ 7ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬಂಟ್ವಾಳ, ಕೈಕುಂಜೆ, ಬಿ.ಸಿ.ರೋಡ್ ಇಲ್ಲಿ ಅರ್ಜಿ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.