ಮಂಗಳವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ಅಗ್ನಿ ಅವಘಡಕ್ಕೆ ಎರಡು ಅಂಗಡಿ ಮಳಿಗೆಗಳು ಸುಟ್ಟು ಕರಕಲಾಗಿವೆ.ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಆರಂಭದಲ್ಲಿ ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ನಂತರದಲ್ಲಿ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಎರಡೂ ಅಂಗಡಿಗಳು ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ತಂಡ ಆಗಮಿಸಿ ಬೆಂಕಿ ನಂದಿಸಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ವಿಟ್ಲದಲ್ಲಿ ಅಂಗಡಿಗಳು ಬೆಂಕಿಗಾಹುತಿ, ಮಂಗಳವಾರ ಬೆಳಗ್ಗೆ ನಡೆದ ಘಟನೆ"