ಬಂಟ್ವಾಳ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಅವರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

ಜಾಹೀರಾತು

ಬಂಟ್ವಾಳ: ಪ್ರತಿಭಾವಂತರನ್ನು ಗುರುತಿಸಿ, ಅವರನ್ನು ಸನ್ಮಾನಿಸಿ, ಗೌರವಿಸಿ, ಅಭಿನಂದಿಸುವುದು ಒಳ್ಳೆಯ ಕೆಲಸವಾಗಿದ್ದು, ಆ ರೀತಿ ಮಾಡುವುದರಿಂದ ಇತರೇ ವ್ಯಕ್ತಿ ಯಾ ವಿದ್ಯಾರ್ಥಿಗಳು ಸಾಧನೆ ಮಾಡುವುದಕ್ಕೆ ಪ್ರೇರಣೆ ಆಗಲಿದೆ ಎಂದು ಬೆಂಗಳೂರುನ ನಿವೃತ್ತ ಪೊಲೀಸ್ ಆಯುಕ್ತ ಜಿ.ಎ. ಬಾವಾ ಹೇಳಿದರು.

ಹಿದಾಯ ಫೌಂಡೇಶನ್ ಮಂಗಳೂರು ವತಿಯಿಂದ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿರುವ ಹಿದಾಯ ಶೇರ್ ಎಂಡ್ ಕೇರ್ ಕಾಲೋನಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ಕೆ. ಇವರ ಸನ್ಮಾನ ಮತ್ತು ಹಿದಾಯ ಶೇರ್ ಎಂಡ್ ಕೇರ್ ಕಾಲೋನಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಲಯನ್ಸ್ ಜಿಲ್ಲಾ ಗವರ್ನರ್ ಡಾ. ಗೀತಪ್ರಕಾಶ್, ಸನ್ಮಾನ ಸ್ವೀಕರಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ಕೆ. ಮಾತನಾಡಿದರು, ಹಿದಾಯ ಫೌಂಡೇಶನ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಬಿ. ಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ, ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿ ಆಶಿಕಾ ಮಾತನಾಡಿದರು. ಉದ್ಯಮಿಗಳಾದ ಆಶಿಫ್ ಕರ್ನಿರೆ, ಶೌಕತ್, ಶರೀಫ್ ವೈಟ್‌ಸ್ಟೋನ್, ಅಬೂಬಕ್ಕರ್ ಸಿದ್ದಿಕ್, ಸಂಸ್ಥೆಯ ಕೋಶಾಧಿಕಾರಿ ಝಿಯಾವುದ್ದೀನ್ ಉಪಸ್ಥಿತರಿದ್ದರು. ಹಿದಾಯ ಫೌಂಡೇಶನ್‌ನ ಅಬ್ದುಲ್ ರಜಾಕ್ ಅನಂತಾಡಿ ಸ್ವಾಗತಿಸಿ, ಆದಿದ್ ಅಸ್ಕರ್ ವಂದಿಸಿದರು. ಬಿ. ಮಹಮ್ಮದ್ ತುಂಬೆ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ