ಬಂಟ್ವಾಳ

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ – ತಂಡಗಳ ರಚಿಸಿ ತನಿಖೆ: ಎಸ್ಪಿ ಡಾ. ಲಕ್ಷ್ಮೀಪ್ರಸಾದ್

ಬಂಟ್ವಾಳದ ಅಪಾರ್ಟ್ ಮೆಂಟ್ ಒಂದರಲ್ಲಿ ಹತ್ಯೆಗೀಡಾದ ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಹಂತಕರ ಪತ್ತೆಗೆ ಪೊಲೀಸರು ವಿವಿಧ ತಂಡಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರ ಆರೋಪಿಗಳನ್ನು ಹಿಡಿಯುವ ವಿಶ್ವಾಸ ತಮಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟಿನ ಅಪಾರ್ಟ್ ಮೆಂಟ್ ನಲ್ಲಿ ಹತ್ಯೆಗೀಡಾದ ಫ್ಲ್ಯಾಟ್ ಗೆ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಬಳಿಕ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಸಿಐ ನಾಗರಾಜ್, ಎಸ್ಸ್ಐಗಳಾದ ನಂದಕುಮಾರ್, ಪ್ರಸನ್ನ ಅವರಿಗೆ ವಿವಿಧ ಸೂಚನೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾತ್ರಿ ನಡೆದಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಸಾಕ್ಷಿ ಆಧಾರಗಳ ಸಂಗ್ರಹ ನಡೆಯುತ್ತಿದೆ. ಅವರು ಎಲ್ಲೆಲ್ಲಿ ವ್ಯವಹಾರ ಮಾಡುತ್ತಿದ್ದರೋ ಅದನ್ನು ಪರಿಶೀಲಿಸುತ್ತಿದ್ದೇವೆ ಎಂದರು. ತಂಡಗಳನ್ನು ರಚಿಸಿ ತನಿಖೆ ತೀವ್ರಗತಿಯಲ್ಲಿ ನಡೆಸುತ್ತಿದ್ದೇವೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವುದಾಗಿ ಎಸ್ಪಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ