ಕಲಿಕೆಯಲ್ಲಿ ಬದುಕು, ಸಂಪನ್ಮೂಲ, ಅನುಭವಗಳದ್ದು ಪ್ರಮುಖ ಪಾತ್ರ: ಕೃಷ್ಣಮೂರ್ತಿ

ಜಾಹೀರಾತು

ಮಕ್ಕಳ ಕಲಿಕೆಯಲ್ಲಿ ವಿದ್ಯಾರ್ಥಿಗಳ ದಿನನಿತ್ಯದ ಬದುಕು, ಸ್ಥಳೀಯ ಸಂಪನ್ಮೂಲಗಳು, ಸಮುದಾಯ ಹಾಗು ಅನುಭವಗಳು ಪ್ರಮುಖ ಪಾತ್ರ ವಹಿಸುತ್ತದೆ  ಎಂದು ಬೆಂಗಳೂರಿನ ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಸಂಸ್ಥೆಯ ಕಲಾಶಿಕ್ಷಣ ವಿಭಾಗದ ಕಾರ್ಯಕ್ರಮ ಅಧಿಕಾರಿ ಕೃಷ್ಣಮೂರ್ತಿ ಹೇಳಿದರು.
ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಆಯೋಜಿಸಲಾದ “ಮಕ್ಕಳು ಮತ್ತು ಶಿಕ್ಷಣ” ಸಂವಾದ ಕಾರ್ಯಕ್ರಮದಲ್ಲಿ ಅವರು ಶಿಕ್ಷಕರು ಹಾಗೂ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.

ಜೀವನ ಕೌಶಲ್ಯವಿಲ್ಲದ ಕಲಿಕೆ ಕೇವಲ ಮಾಹಿತಿಯಾಗುತ್ತದೆ,  ಜೊತೆಗೆ ಪಠ್ಯದಲ್ಲಿರುವ ಅನೇಕ ವಿಚಾರಗಳು ಅಪ್ರಯೋಜಕ ಎನ್ನಿಸಿಕೊಳ್ಳುತ್ತದೆ.  ಭೌಗೋಳಿಕ ಹಿನ್ನೆಲೆಯ ಆಧಾರದಲ್ಲಿ ಬದಲಾಗುವ ಭಾಷೆ, ಸಂಸ್ಕೃತಿ ಹಾಗೂ ಆಹಾರ ಪದ್ಧತಿಯ ಬದಲಾವಣೆಯ ಬಗ್ಗೆಯೂ ಗಮನಹರಿಸಿದರೆ ಸಮಾಜಶಾಸ್ತ್ರದ ಪರಿಚಯವಾಗುತ್ತದೆ ಎಂದ ಅವರು, ಶಾಲಾ ತರಗತಿಗಳಲ್ಲಿ ಸ್ಥಳೀಯ ಸಂಪನ್ಮೂಲಗಳನ್ನು ಸಂಯೋಜಿತಗೊಳಿಸುವ ಬೋಧನಾ ಕ್ರಮಗಳು ಮಕ್ಕಳ ಕಲಿಕೆಯಲ್ಲಿ ಧನಾತ್ಮಕವಾಗಿರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈಗಿನ ಶಿಕ್ಷಣಪದ್ದತಿಯು ಪಠ್ಯಕ್ರಮಕ್ಕೆ ಮೀರಿದ ಜೀವನ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳಸುವಲ್ಲಿ ಹಿನ್ನಡೆಯನ್ನು ಕಾಣುತ್ತಿದೆ ಎಂದು ಅಭಿಪ್ರಾಯಿಸಿದ ಅವರು, ಈ ನಿಟ್ಟಿನಲ್ಲಿ 2020 ರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಹೊಸ ಕನಸುಗಳನ್ನು ಹುಟ್ಟುಹಾಕಿದೆ, ಇದು ಸಾಕಾರಗೊಳ್ಳಲಿ ಎಂದರು.
ಐಎಫ್ಎ ಸಂಸ್ಥೆಯು  ಶಿಕ್ಷಕರು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ ಸರಕಾರಿ ಶಾಲೆಗಳ ಸಬಲೀಕರಣದಲ್ಲಿ ಡಿಎಸ್ಇಆರ್ ಟಿ  ಯೊಂದಿಗೆ ಕೈ ಜೋಡಿಸಿದೆ ಎಂದ ಅವರು, ಐಎಫ್ಎ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.
ಪತ್ರಕರ್ತ ಮತ್ತು  ಐಎಫ್ಎ ಗ್ರ್ಯಾಂಟಿ, ಮೌನೇಶ ವಿಶ್ವಕರ್ಮ ಸ್ವಾಗತಿಸಿದರು . ಪತ್ರಕರ್ತ ವೆಂಕಟೇಶ್ ಬಂಟ್ವಾಳ ವಂದಿಸಿದರು. ಪತ್ರಕರ್ತ ರತ್ನದೇವ್ ಪೂಂಜಾಲಕಟ್ಟೆ ಕಾರ್ಯಕ್ರಮ‌ ನಿರ್ವಹಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲಿಕೆಯಲ್ಲಿ ಬದುಕು, ಸಂಪನ್ಮೂಲ, ಅನುಭವಗಳದ್ದು ಪ್ರಮುಖ ಪಾತ್ರ: ಕೃಷ್ಣಮೂರ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*