ಜಿಲ್ಲಾ ಸುದ್ದಿ

ಮತ್ತೊಂದು ಹತ್ಯೆಗೆ ಬೆಚ್ಚಿಬಿದ್ದ ಬಂಟ್ವಾಳ, ಎರಡೇ ದಿನಗಳಲ್ಲಿ ಬಂಟ್ವಾಳದಲ್ಲಿ ಎರಡು ಮರ್ಡರ್

ಜಾಹೀರಾತು

ಎರಡು ದಿನಗಳ ಅವಧಿಯಲ್ಲಿ ಎರಡು ಹತ್ಯಾ ಪ್ರಕರಣಗಳು ಬಂಟ್ವಾಳದ ಜನತೆಯನ್ನು ಬೆಚ್ಚಿ ಬೀಳಿಸಿವೆ. ಬುಧವಾರ ಮಧ್ಯಾಹ್ನ ಸುರೇಂದ್ರ ಬಂಟ್ವಾಳ್ (39) ಬಂಟ್ವಾಳದ ಫ್ಲ್ಯಾಟ್ ಒಂದರಲ್ಲಿ ಕೊಲೆಯಾಗಿ ಬಿದ್ದಿದ್ದರೆ, ಶುಕ್ರವಾರ ಸಂಜೆ ಮೇಲ್ಕಾರ್ ನ ಲ್ಲಿ ಫಾರೂಕ್ (28) ಎಂಬಾತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಒಂದು ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಪ್ರಕರಣವೂ ಸಂಭವಿಸಿರುವುದು ಬಂಟ್ವಾಳ ಪೊಲೀಸರಿಗೆ ಸವಾಲಾದರೆ, ಎರಡು ಹತ್ಯೆ ಘಟನೆಗಳು ಬಂಟ್ವಾಳ ಜನತೆಯನ್ನು ಬೆಚ್ಚಿಬೀಳಿಸಿವೆ.

ಜಾಹೀರಾತು

ಶುಕ್ರವಾರ ಸಂಜೆ ಮೇಲ್ಕಾರ್ ನ ಗುಡ್ಡೆಯಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಲಾಗಿದೆ.  ಮೇಲ್ಕಾರಿನ ಗುಡ್ಡೆಯಂಗಡಿ ಎಂಬಲ್ಲಿ ಘಟನೆ ನಡೆದಿದ್ದು, ಕಲ್ಲಡ್ಕ ನಿವಾಸಿ ಚೆನ್ನಾ ಫಾರೂಕ್ (28) ನನ್ನು ಕೊಲೆ ಮಾಡಲಾಗಿದೆ. ಉಮರ್ ಫಾರೂಕ್ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಉಮರ್ ಫಾರೂಕ್ ನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ